ಮೃತ ನವೀನ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ!
ಹಾವೇರಿ : ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಅವರ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು.
ಈ ವೇಳೆ ನವೀನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಉಕ್ರೇನ್ನಲ್ಲಿ ಕನ್ನಡಿಗ ನವೀನ್ ಮೃತಪಟ್ಟಿದ್ದು, ಅವರ ಮೃತದೇಹವನ್ನ ಭಾರತಕ್ಕೆ ತರುವ ಪ್ರಯತ್ನ ಮಾಡಬೇಕು.
ಸರಕಾರ ಕೂಡಲೇ ಮೃತದೇಹ ತರಲು ಪಯತ್ನಿಸಬೇಕು.
ಮೃತದೇಹ ತರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇನ್ನು ಈ ವೇಳೆ ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ ಹಾಜರಿದ್ದರು.
Ex CM Siddaramaiah visits naveen residence who died in Ukraine









