ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ (Mohammad Azharuddin) ಸೇರಿದಂತೆ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ (ಎಚ್ಸಿಎ) ಕೆಲವು ಮಾಜಿ ಪದಾಧಿಕಾರಿಗಳ ವಿರುದ್ಧ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪವೊಂದು ಕೇಳಿ ಬಂದಿದೆ.
ಈ ಕುರಿತು ದೂರು ದಾಖಲಾಗಿದೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಕಾಂತೆ ಬೋಸ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಹೈದರಾಬಾದ್ನ ಉಪ್ಪಳ ಪೊಲೀಸ್ ಠಾಣೆಯಲ್ಲಿ ಎಚ್ಸಿಎ ಮಾಜಿ ಅಧ್ಯಕ್ಷ ಅಜರುದ್ದೀನ್ ಹಾಗೂ ಇತರ ಮಾಜಿ ಪದಾಧಿಕಾರಿಗಳ ವಿರುದ್ಧ ಸಂಬಂಧಿತ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ, ಈ ಆರೋಪವನ್ನು ಅಜರುದ್ದೀನ್ ತಳ್ಳಿ ಹಾಕಿದ್ದಾರೆ. ಸೂಕ್ತ ಸಮಯದಲ್ಲಿ ಅವುಗಳಿಗೆ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.
ತೆಲಂಗಾಣ ಹೈಕೋರ್ಟ್ಗೆ ವಿವಿಧ ಪಕ್ಷಗಳು ಸಲ್ಲಿಸಿದ ಹಿಂದಿನ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಸಂಘದ ಆಗಿನ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಅಗ್ನಿಶಾಮಕ ಉಪಕರಣಗಳ ಕುರಿತು ಚರ್ಚಿಸಿದ್ದರು. ಆದರೆ, ಕಾರಣ ನೀಡದೆ ಯಾವುದೇ ಬಿಡ್ದಾರರಿಗೆ ಟೆಂಡರ್ ಹಂಚಿಕೆ ಮಾಡಿರಲಿಲ್ಲ. ನಂತರ, ಅದೇ ಕೆಲಸಕ್ಕಾಗಿ ಎಚ್ಸಿಎ ಎರಡನೇ ಟೆಂಡರ್ ಕರೆಯಿತು”ಎಂದು ದೂರುದಾರರು ಹೇಳಿದ್ದಾರೆ.