ಕೋಲಾರ: ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಆಪ್ತ ಕೌನ್ಸಿಲರ್ ಶ್ರೀನಿವಾಸ್ (Shrinivas) ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಶ್ರೀನಿವಾಸಪುರದ ಹೊಗಳಗೆರೆ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿದ್ದ ಬಾರ್ (Bar) ಕಾಮಗಾರಿಯನ್ನು ವೀಕ್ಷಿಸಲು ಹೋಗಿದ್ದ ಸಂದರ್ಭದಲ್ಲಿ 6 ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಕೂಡಲೇ ಶ್ರೀನಿವಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ಶ್ರೀನಿವಾಸ್ ಕಾರು ಚಾಲಕ ಮಾತನಾಡಿ, 6 ಜನರು ಮಾತನಾಡಿಸಲು ಬಂದಿದ್ದರು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮುಖದ ಮೇಲೆ ಸ್ಪ್ರೇ ಸಿಂಪಡಿಸಿದ್ದಾನೆ. ನಂತರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.