ಸರ್ಕಾರದ ನಿರ್ಲಕ್ಷ್ಯದಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುವ ಎಚ್ಚರಿಕೆ ನೀಡಿದ ತಜ್ಞರು..!
ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಅದ್ರಲ್ಲೂ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಸಂಖ್ಯೆಯನ್ನ ಇಳಿಕೆ ಮಾಡಲಾಗಿದೆ. ಸರ್ಕಾರದ ಈ ನಡೆಯಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಇದೀಗ ಸರ್ಕಾರ ಕೋವಿಡ್ ಟೆಸ್ಟ್ ಸಂಖ್ಯೆಯನ್ನೇ ಇಳಿಕೆ ಮಾಡಿದೆ. ಟೆಸ್ಟ್ ಕಡಿಮೆ ಮಾಡಿದರೆ ಸೋಂಕಿತರ ಪತ್ತೆ ಸಂಖ್ಯೆ ಕಡಿಮೆಯಾಗುತ್ತದೆ. ಆಕ್ಸಿಜನ್ ಬೆಡ್, ಐಸಿಯು ಬೆಡ್ ಗಳ ಸಮಸ್ಯೆ ಎದುರಾಗಲ್ಲ. ಒಂದು ವೇಳೆ ಕೋವಿಡ್ ಟೆಸ್ಟ್ ಸಂಖ್ಯೆ ಹೆಚ್ಚಿಸಿದರೆ ಸೋಂಕಿತರ ಪತ್ತೆ ಸಂಖ್ಯೆ ಹೆಚ್ಚುವುದರಿಂದ ಆಕ್ಸಿಜನ್, ಐಸಿಯು ಸಮಸ್ಯೆ ಹೆಚ್ಚಾಗಲಿದೆ ಎನ್ನಲಾಗಿದೆ.
ಸರ್ಕಾರದ ಈ ನಡೆಗೆ ಆತಂಕ ವ್ಯಕ್ತಪಡಿಸಿರುವ ತಜ್ಞರು, ಈ ರೀತಿ ಮಾಡುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುವುದಿಲ್ಲ. ಬದಲಾಗಿ ಸಮುದಾಯಗಳ ಮಟ್ಟದಲ್ಲಿ ಸೋಂಕು ಹರಡುತ್ತದೆ. ಇದರಿಂದ ಕೊರೊನಾ 3ನೇ ಅಲೆಗೆ ನಾವೇ ದಾರಿ ಮಾಡಿಕೊಟ್ಟಂತಾಗುತ್ತದೆ. ಮೊದಲು ಕೋವಿಡ್ ಟೆಸ್ಟ್ ಸಂಖ್ಯೆ ಹೆಚ್ಚಿಸಿ ಸೋಂಕಿತರನ್ನು ಪತ್ತೆ ಮಾಡಿ ಅವರಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಸೂಚಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.