‘ಪರೇಶ್ ರಾವಲ್ ಇನ್ನಿಲ್ಲ’ – ನಕಲಿ ಪೋಸ್ಟ್ ಗೆ ಖಾರವಾದ ಉತ್ತರ ನೀಡಿದ ನಟ
ಸ್ಯಾಂಡಲ್ ವುಡ್ ನ ದೊಡ್ಡಣ್ಣ…. ಶಕ್ತಿಮಾನ್ ಖ್ಯಾತಿಯ ಮುಖೇಶ್ ಖನ್ನಾ ಆಯ್ತು… ಈಗ ಬಾಲಿವುಡ್ ನ ಖ್ಯಾತ ನಟ ಪರೇಶ್ ರಾವಲ್ ಸತ್ತುಹೋಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ವೈರಲ್ ಆಗ್ತಿದೆ.. ಈ ವದಂತಿ ಖುದ್ದು ಪರೇಶ್ ರಾವಲ್ ಗಮನಕ್ಕೂ ಬಂದಿದ್ದು, ತಮ್ಮ ಸಾವಿನ ಸುದ್ದಿಯನ್ನೇ ನೋಡಿ ಶಾಕ್ ಆಗಿದ್ದಾರೆ. ಈ ರೀತಿ ಪೋಸ್ಟ್ ಮಾಡಿದ್ದವರಿಗೆ ಖಾರವಾಗಿ ಉತ್ತರಿಸಿದ್ಧಾರೆ.
ಸಾಮಾಜಿಕ ಜಾಲತಾಣದಲ್ಲಿ ಪರೇಶ್ ರಾವಲ್ ಇನ್ನಿಲ್ಲ ಎಂಬ ಪೋಸ್ಟ್ಗಳು ಅಭಿಮಾನಿಗಳಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಆದ್ರೆ ಇದು ನಕಲಿ ಸುದ್ದಿಯೆಂದು ಗೊತ್ತಾದ ನಂತರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದರು. ಇನ್ನೂ ಮೇ 14 ರಂದು ಪರೇಶ್ ನಿಧನರಾಗಿದ್ದಾರೆ ಎಂಬ ಪೋಸ್ಟ್ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಪರೇಶ್ ರಾವಲ್ , ‘ಕ್ಷಮೆ ಇರಲಿ, ನಾನು ಬೆಳಗ್ಗೆ 7 ಗಂಟೆಯಿಂದ ನಿದ್ರೆಯಲ್ಲಿದ್ದೆ’ ಎಂದಿದ್ದಾರೆ.
ಒಟ್ಟಾರೆ ಕೋವಿಡ್ ಹಾವಳಿ ನಡುವೆ ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಸಾವನಪ್ಪಿರೋದಾಗಿ ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನ ಹಬ್ಬಸುತ್ತಾ ನೆಟ್ಟಿಗರನ್ನ ಗೊಂದಲಗಳಿಗೀಡು ಮಾಡುತ್ತಿದ್ದಾರೆ. ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.