ತಮಿಳುನಾಡಿನ ಕುನ್ನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಮುಖ್ಯಸ್ಥ ಜನರಲ್ ರಾವತ್ ಅವರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ತಿಳಿದು ಬಂದಿಲ್ಲ. Rawat saaksha tv
ಪ್ರಧಾನ ಮಂತ್ರಿ ನೇತೃತ್ವದ ಭದ್ರತಾ ಸಂಪುಟ ಸಮಿತಿ (ಸಿಸಿಎಸ್) ಇಂದು ಸಂಜೆ 6.30 ಕ್ಕೆ ಸಭೆ ಸೇರಲಿದ್ದು, ತಮಿಳುನಾಡಿನ ಕೂನೂರು ಬಳಿ ಸೇನಾಧಿಕಾರಿಗಳು ಪಯಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ವಿಷಯವನ್ನು ಚರ್ಚಿಸಲಿದ್ದಾರೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.