ಬೆಂಗಳೂರು: ಕೌಟುಂಬಿಕ ಕಲಹದಿಂದಾಗಿ (Family Dispute) ಕ್ರಿಕೆಟ್ ಪಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ (Soladevanahalli) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲರಾಜ್ (41) ಆತ್ಮಹತ್ಯೆಗೆ ಶರಣಾದ ಆಟಗಾರ. ಅವರು ಹೆಸರಘಟ್ಟ (Hesaraghatta) ರಸ್ತೆ ಹತ್ತಿರದ ಸಿಲುವೆಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಲರಾಜ್ ಕಳೆದ 18 ವರ್ಷಗಳ ಹಿಂದೆ ಕುಮಾರಿ ಎಂಬ ಮಹಿಳೆಯನ್ನು 2ನೇ ಮದುವೆಯಾಗಿದ್ದರು. ಬಾಲರಾಜ್ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಉತ್ತಮ ಕ್ರೀಡಾಪಟುವಲಾಗಿದ್ದರು. ಅವರು ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಹೀಗಾಗಿ ಪತಿ ಹಾಗೂ ಪತ್ನಿಯ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ, ಬಾಲರಾಜ್ ಬದಲಾಗದ ಹಿನ್ನೆಲೆಯಲ್ಲಿ ಪತ್ನಿ ತವರು ಮನೆ ಸೇರಿದ್ದರು. ಆದರೆ, ಯಾರೂ ಇಲ್ಲದ ವೇಳೆ ಬಾಲರಾಜ್ ನೇಣಿಗೆ ಶರಣಾಗಿದ್ದಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








