ADVERTISEMENT
Thursday, September 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅನ್ನದಾತರ ಬಾರುಕೋಲು ಚಳವಳಿ | ರೈತರ ಕಿಚ್ಚಿಗೆ ಸ್ತಬ್ದವಾಗುತ್ತಾ ಸಿಲಿಕಾನ್ ಸಿಟಿ..!

Kariyappa N by Kariyappa N
December 9, 2020
in Newsbeat, Politics, Samagra karnataka
protest
Share on FacebookShare on TwitterShare on WhatsappShare on Telegram

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ ಹಾಗೂ ಎಪಿಎಂಸಿ ಕಾಯ್ದೆಗಳ ವಿರುದ್ಧ ಹೋರಾಟ ಮುಂದುವರೆಸಿರುವ ಅನ್ನದಾತರು, ಇಂದು ಬಾರುಕೋಲು ಚಳವಳಿ ಮೂಲಕ ರಾಜಧಾನಿ ಬೆಂಗಳೂರಿಗೆ ಲಗ್ಗೆ ಹಾಕಲಿದ್ದಾರೆ.
ನಿನ್ನೆಯಷ್ಟೇ ಭಾರತ್ ಬಂದ್‍ನಲ್ಲಿ ಪಾಲ್ಗೊಂಡಿದ್ದ ರೈತರು, ಇಂದು ಬೆಂಗಳೂರಿನಲ್ಲಿ ಬಾರುಕೋಲು ಚಳವಳಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಬಿಸಿ ಮುಟ್ಟಿಸಲಿದ್ದಾರೆ.
ರಾಜ್ಯ ರೈತ ಸಂಘ, ಹಸಿರುಸೇನೆ, ಕಬ್ಬು ಬೆಳೆಗಾರರ ಸೇರಿದಂತೆ ರೈತ ಸಂಘಟನೆಗಳ ನೇತೃತ್ವದಲ್ಲಿ ಇಂದು 10 ಸಾವಿರಕ್ಕೂ ಹೆಚ್ಚು ರೈತರು ಸರ್ಕಾರದ ವಿರುದ್ಧ ಬಾರುಕೋಲಿನ ಚಾಟಿಯ ಸದ್ದು ಮೊಳಗಿಸಲಿದ್ದಾರೆ.


ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಬಾರುಕೋಲು ಚಳವಳಿ ನಡೆಸಿ ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತ ಸಂಘಟನೆಗಳು ನಿರ್ಧರಿಸಿವೆ.
ಈಗಾಗಲೇ ರೈಲಿನ ಮೂಲಕ ರೈಲ್ವೆ ನಿಲ್ದಾಣಕ್ಕೆ ರೈತರು ಆಗಮಿಸಿದ್ದು, ಕೆಲವೇ ಹೊತ್ತಿನಲ್ಲಿ ರೈತರ ಪಾದಯಾತ್ರೆ ಆರಂಭವಾಗಲಿದೆ.
ರೈಲ್ವೆ ನಿಲ್ದಾಣಕ್ಕೆ ಬಂದ ರೈತರನ್ನು ಹಸಿರು ಶಾಲು ತೆಗೆಯಿರಿ, ಬಾರುಕೋಲು ತೆಗೆಯಿರಿ ಎಂದು ಪೊಲೀಸರು ವಾರ್ನ್ ಮಾಡಿದ ಹಿನ್ನೆಲೆಯಲ್ಲಿ ವಾಗ್ವಾದ ನಡೆದಿದೆ.
ಪ್ರಮುಖವಾಗಿ ಭೂಸುಧಾರಣಾ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ರೈತರು ನಿತಂತರ ಹೋರಾಟ ನಡೆಸಲಿದ್ದಾರೆ. ಬಾರುಕೋಲು ಚಳವಳಿ ಮೂಲಕ ಸರ್ಕಾರಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ.

Related posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

September 17, 2026
EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

September 17, 2026

ರೈತರ ಪ್ರತಿಭಟನೆ ಹಿನ್ನೆಲೆ ಪೋಲೀಸರು ಅಲರ್ಟ್..!
ಬೆಂಗಳೂರು ನಗರದ ನಾಲ್ಕು ದಿಕ್ಕುಗಳಿಂದ ರೈತರು ರಾಜಧಾನಿಗೆ ಲಗ್ಗೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರೈಲ್ವೆ ನಿಲ್ದಾಣ, ಫ್ರೀಡಂಪಾರ್ಕ್, ವಿಧಾನಸೌಧ, ರಾಜಭವನಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ರೈಲ್ವೆ ನಿಲ್ದಾಣದ ಬಳಿ 500 ಪೊಲೀಸರ ನಿಯೋಜನೆ ಮಾಡಲಾಗಿದ್ದು, ಅನಂದರಾವ್ ವೃತ್ತದ ಬಳಿ 200 ಪೊಲೀಸರು, ಕಾರ್ಪೋರೇಷನ್, ಮೈಸೂರು ಬ್ಯಾಂಕ್ ವೃತ್ತದ ಬಳಿ 800 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

farmers protest
ವಿಧಾನಸೌಧ ಹಾಗೂ ರಾಜಭವನಕ್ಕೆ ರೈತರು ಮುತ್ತಿಗೆ ಹಾಕಲು ಪ್ಯಾಲೇಸ್ ರಸ್ತೆ ಮೂಲಕ ಬರುತ್ತಿರುವ ಹಿನ್ನೆಲೆಯಲ್ಲಿ ಮಹಾರಾಣಿ ಕಾಲೇಜು, ಸಿಐಡಿ ಕಚೇರಿ ಬಳಿ ಬ್ಯಾರಿಕೇಡ್ ಹಾಕಲಾಗಿದೆ.

ಟ್ರಾಫಿಕ್ ಜಾಮ್ ಬಿಸಿ
ಕೃಷಿ ಕಾಯ್ದೆಗಳ ವಿರುದ್ಧ ರೈತರು ಶಕ್ತಿಸೌಧಕ್ಕೆ ಮುತ್ತಿಗೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಇಂದು ಸ್ತಬ್ದವಾಗುವ ಸಾಧ್ಯತೆ ಇದೆ. ರೈತರು ಪಾದಯಾತ್ರೆ ನಡೆಸುವ ರಸ್ತೆಗಳ ಮಾರ್ಗವನ್ನು ಪೊಲೀಸರು ಡೈವರ್ಟ್ ಮಾಡಿದ್ದು, ಕೆಲವೆಡೆ ಒನ್‍ವೇ ಮಾಡಲಾಗಿದೆ. ಬೆಂಗಳೂರು ನಗರ ಪ್ರವೇಶ ಮಾಡುವ ಟೋಲ್‍ಗಳಲ್ಲೇ ರೈತರನ್ನು ತಡೆಯಲು ಪೊಲೀಸರು ಯತ್ನಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.
ರೈತ ಸಂಘಟನೆಗಳಲ್ಲದೆ, ಬಿಬಿಎಂಪಿ ಕಚೇರಿಯಿಂದ ರಾಜಭವನವರೆಗೆ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸಾವಿರಾರು ಕಾರ್ಯಕರ್ತರು ಜಾಥಾ ನಡೆಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರಕ್ಕೆ ಇಂದು ಅಕ್ಷರಶಃ ಟ್ರಾಫಿಕ್ ಜಾಮ್‍ನ ಬಿಸಿ ತಟ್ಟಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangalorebarukolu movementBJPcentral govtFarmers protestkarnataka govtNarendra modi
ShareTweetSendShare
Join us on:

Related Posts

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

ಬರೀ ಬಿಲ್ಲು ಮಾಡೋದಲ್ಲ ಕೆಲಸ ಮಾಡೋದನ್ನ ಕಲಿಯಿರಿ: ಲೂಟಿ ಹೊಡೆಯುವ ಇಂಜಿನಿಯರ್‌ಗಳ ಅತಿಬುದ್ಧಿವಂತಿಕೆಗೆ ಕೃಷ್ಣ ಭೈರೇಗೌಡರ ಬ್ರೇಕ್

by Shwetha
September 17, 2026
0

ಬೆಂಗಳೂರು ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ವಿಷಯಗಳಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅವರು ಅಕ್ಷರಶಃ ಸಮರ ಸಾರಿದ್ದಾರೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ...

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

EPFO ವೇತನ ಮಿತಿ ₹25,000ಕ್ಕೆ ಏರಿಕೆ: 51 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ

by Shwetha
September 17, 2026
0

ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಹಾಗೂ ನಿವೃತ್ತಿ ಜೀವನದ ಆರ್ಥಿಕ ಸುರಕ್ಷತೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ...

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

ಆಸ್ತಿ ತೆರಿಗೆ ಕಟ್ಟಲು ಸಾಫ್ಟ್ ವೇರ್ ದಂಡವೇಕೆ: ಸಾಫ್ಟ್ ವೇರ್ ಶುಲ್ಕದ ಹೆಸರಲ್ಲಿ ಡಿಜಿಟಲ್ ಸುಲಿಗೆಗೆ ಸಜ್ಜಾದ ಸರ್ಕಾರ-ಹೊಸ ಸೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ ಬಿಜೆಪಿ

by Shwetha
September 17, 2026
0

ಬೆಂಗಳೂರು ಎಂದರೆ ಬರೀ ಟ್ರಾಫಿಕ್ ಕಿರಿಕಿರಿ ಮಾತ್ರವಲ್ಲ, ಈಗ ತೆರಿಗೆಯ ಕಿರಿಕಿರಿ ಕೂಡ ಮಾಮೂಲಾಗಿದೆ. ಈಗಾಗಲೇ ಆಸ್ತಿ ತೆರಿಗೆಯ ಜೊತೆಗೆ ಕಸದ ಸೆಸ್, ಗ್ರಂಥಾಲಯ ಸೆಸ್, ಒಳಚರಂಡಿ...

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

ರೂಪಾಯಿ ಮೌಲ್ಯ 96ರ ಗಡಿ ಸಮೀಪ: ಫೆಡ್ ನಿರ್ಧಾರಕ್ಕೂ ಮುನ್ನ ಹೆಚ್ಚಿದ ಒತ್ತಡ, ಜನಸಾಮಾನ್ಯರ ಖರ್ಚಿಗೂ ಬಿಸಿ

by Shwetha
September 17, 2026
0

ಅಮೆರಿಕದ ಫೆಡರಲ್ ರಿಸರ್ವ್‌ನ ಮಹತ್ವದ ಬಡ್ಡಿದರ ನಿರ್ಧಾರಕ್ಕೂ ಮುನ್ನ ಭಾರತೀಯ ರೂಪಾಯಿ ಮೇಲೆ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಬುಧವಾರ ರೂಪಾಯಿ ಡಾಲರ್ ಎದುರು 96ರ ಸಮೀಪ ವಹಿವಾಟು...

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

ಅಭಿನಯ ಚತುರನಿಗೆ ದಾದಾಸಾಹೇಬ್ ಫಾಲ್ಕೆ ಮುಕುಟ: ಅನಂತ್ ನಾಗ್ ಸಾಧನೆಗೆ ರಾಷ್ಟ್ರಮಟ್ಟದ ಸಲಾಂ

by Shwetha
September 17, 2026
0

ಬೆಳ್ಳಿತೆರೆಯ ಮೇಲೆ ನವರಸಗಳನ್ನು ಬಸಿದು, ಕೋಟಿಗಟ್ಟಲೆ ಕನ್ನಡಿಗರ ಹೃದಯ ಗೆದ್ದ ಸಹಜ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram