ಚಾಮರಾಜನಗರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಹೊನ್ನೂರು ಪ್ರಕಾಶ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ನೀತಿಯನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹಲವಾರು ದಿನಗಳಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟು ಈಡೇರಿಸುವಂತೆ ಎಷ್ಟೇ ಒತ್ತಾಯಿಸಿದ್ರು ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಹಿನ್ನೆಲೆ ಇಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖವಾಗಿ ರೈತ ವಿರೋಧಿ ಕಾನೂನುಗಳು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ , ತೆರಕಣಾಂಬಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ವಿರೋಧಿ ಚಳುವಳಿ ನಡೆಸಿದ ರೈತರನ್ನು ಜಿಲ್ಲಾಡಳಿತ ಭವನ ಮುಂದೆ ಪೋಲಿಸರು ಬಂಧಿಸಿದ್ದಾರೆ
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








