ಜಮ್ಮು-ಕಾಶ್ಮೀರ: ರಾಮ ಮಂದಿರವು (Ayodhya Ram Mandir) ಲೋಕಾರ್ಪಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಇಡೀ ಭಾರತವೇ ಇದಕ್ಕಾಗಿ ಕಾಯ್ದು ಕುಳಿತಿದೆ. ಈ ಮಧ್ಯೆ ಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ (Farooq Abdullah) ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಜನರ ಕಠಿಣ ಶ್ರಮದಿಂದ ರಾಮಮಂದಿರವು (Ayodhya Ram Temple) ತಲೆ ಎತ್ತಿ ನಿಂತಿದೆ. ಭಗವಾನ್ ರಾಮನು ಹಿಂದೂಗಳಿಗೆ ಮಾತ್ರ ಸೇರಿದವನಲ್ಲ. ಪ್ರಪಂಚದ ಎಲ್ಲರಿಗೂ ಸೇರಿದವನು. ಪುಸ್ತಕಗಳಲ್ಲಿ ಕೂಡ ಇದನ್ನೇ ಬರೆಯಲಾಗಿದೆ ಎಂದು ಹೇಳಿದ್ದಾರೆ.