ಕೊಪ್ಪಳ: ಕಾಂಗ್ರೆಸ್ ನಾಯಕ ಹಾಗೂ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷನ ಮೇಲೆ ಅಪರಿಚಿತ ವ್ಯಕ್ತಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ದೊಡ್ಡಪ್ಪ ದೇಸಾಯಿ (Doddappa Desai) ಹಲ್ಲೆಗೊಳಗಾದ ಮುಖಂಡ. ಗಂಗಾವತಿ ಪಟ್ಟಣದ ಆನೆಗುಂದಿ ರಸ್ತೆಯಲ್ಲಿರುವ ಪಿಎಲ್ ಡಿ ಬ್ಯಾಂಕ್ ಮುಂದೆ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಹಲ್ಲೆ (Assault) ನಡೆಸಿದ್ದಾನೆ. ಕಾರಿನಲ್ಲಿ ಬಂದಿದ್ದ ವ್ಯಕ್ತಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಕೂಡಲೇ ಸ್ಥಳೀಯರು ಆಗಮಿಸುತ್ತಿದ್ದಂತೆ ಆಕ ಕಾರಿನಲ್ಲಿ ಪರಾರಿಯಾಗಿದ್ದಾನೆ. ಹಲ್ಲೆ ಮಾಡಿದ ವ್ಯಕ್ತಿಯ ಮೊಬೈಲ್ ಪತ್ತೆಯಾಗಿದ್ದು, ಭೂಮಿ ಒತ್ತುವರಿದಾರರಿಂದ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇತ್ತೀಚೆಗೆ ದೊಡ್ಡಪ್ಪ ದೇಸಾಯಿ ಅವರು ಸರ್ಕಾರಿ ಶಾಲೆಯ ಭೂಮಿ ಒತ್ತುವರಿ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಗಂಗಾವತಿ ನಗರ ಠಾಣೆ ಸಿಪಿಐ ಪ್ರಕಾಶ್ ಮಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.