ಆನೇಕಲ್: ಮಗಳು (Daughter) ಬೇರೊಬ್ಬ ಯುವಕನೊಂದಿಗೆ ಓಡಿ ಹೋಗಿದ್ದಕ್ಕೆ ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಆನೇಕಲ್ ನ ಚಿಕ್ಕಕೆರೆಯಲ್ಲಿ ನಡೆದಿದೆ. ನಾರಾಯಣಪುರ ಗ್ರಾಮದ ನಿವಾಸಿ ಗೋಪಾಲ್ ನೇಣಿಗೆ ಶರಣಾದ ತಂದೆ ಎನ್ನಲಾಗಿದೆ. ಇವರು ನೇಕಾರಿಕೆ ಉದ್ಯೋಗ ಮಾಡುತ್ತಿದ್ದರು ಎನ್ನಲಾಗಿದ್ದು, ಕಳೆದೆರಡು ದಿನಗಳ ಹಿಂದೆ ಮಗಳು ಮನೆ ಬಿಟ್ಟು ಓಡಿ ಹೋಗಿದ್ದಳು. ಈ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಗೋಪಾಲ್ ಅವರು ಮರ್ಯಾದೆ ಹೋಯಿತು ಎಂಬ ಕಾರಣಕ್ಕೆ ಮನನೊಂದು ಗ್ರಾಮದಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.