ಪುತ್ರನಿಗೆ ಈಜು ಕಲಿಸಲು ಹೋಗಿ ಕೆಸರಿನಲ್ಲಿ ಸಿಲುಕಿ ತಂದೆ – ಮಗ ಸಾವು
ಪುತ್ರನಿಗೆ ಈಜು ಕಲಿಸಲು ಹೋದ ತಂದೆ ಹಾಗೂ ಮಗ ಕೆಸರಿನಲ್ಲಿ ಸಿಲುಕಿ ನೀರು ಪಾಲಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ತಾಲೂಕಿನ ಬಗದೂರಿ ಗ್ರಾಮದಲ್ಲಿ ನಡೆದಿದೆ.
42 ವರ್ಷದ ತಂದೆ ಸೂರ್ಯಕಾಂತ್ ಚಂದ್ರಾಶಾ ಹಾಗೂ 16 ವರ್ಷದ ಮಗ ಅಭಿಷೇಕ್ ದುರಂತ ಸಾವನ್ನಪ್ಪಿದ್ದಾರೆ. ಬಾವಿಯಲ್ಲಿ ಈಜು ಕಲಿಸಲು ಹೋಗಿದ್ದಾಗ ತಂದೆ ಸೂರ್ಯಕಾಂತ್ ಮೊದಲು ಮಗ ಅಭಿಷೇಕ್ನನ್ನ ನೀರಿಗೆ ಇಳಿಸಿ ಈಜಲು ಬಿಟ್ಟಿದ್ದಾರೆ. ಪುತ್ರ ಬಾವಿಯ ಕೆಸರಿನಲ್ಲಿ ಸಿಲುಕಿಕೊಂಡಿದ್ದಾನೆ. ಇದನ್ನ ಗಮನಿಸಿದ ತಂದೆ ಅಭಿಷೇಕ್ನನ್ನು ರಕ್ಷಣೆ ಮಾಡಲು ಸೂರ್ಯಕಾಂತ್ ಸಹ ನೀರಿಗೆ ಇಳಿದಿದ್ದಾರೆ. ಪರಿಣಾಮ ಇಬ್ಬರೂ ನೀರಿನಲ್ಲಿ ಸಿಲುಕಿ ಮೇಲೆ ಬರಲಾಗದೇ ಪ್ರಾಣಬಿಟ್ಟಿದ್ದಾರೆ.
ಮುಡಬಿ ಠಾಣೆ ಪಿಎಸ್ಐ ಬಸಲಿಂಗಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸ್ಥಳದಲ್ಲೇ ವೈದ್ಯರನ್ನು ಕರೆಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.