ಕೊರೊನಾ ನಿಯಂತ್ರಣ ಅಭಿಯಾನದಲ್ಲಿ ಕ್ರಿಶ್ಚಿಯನ್ ಧರ್ಮ ಪ್ರಚಾರ ಮಾಡಿದ ಡಾಕ್ಟರ್
ಮಧ್ಯಪ್ರದೇಶ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ.. ಅನೇಕರು ಈ ಬಗ್ಗೆ ಜಾಗೃತಿ ಮೂಡಿಸುತ್ತಾ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡ್ತಿದ್ದಾರೆ. ಆದ್ರೆ ಇಲ್ಲೊಬ್ಬ ವೈದ್ಯೆ ಅನಾಗರಿಕಳಂತೆ ವರ್ತಿಸಿದ್ದು, ವಿಡಿಯೋ ವೈರಲ್ ಆಗಿದೆ.. ಜನರಿಗೆ ಕೊರೊನಾ ತಡೆಯಲು ಏನೆಲ್ಲಾ ಕ್ರಮ ತೆಗೆದುಕೊಂಡ್ರೆ ಸೂಕ್ತ.. ಯಾವರೀತಿ ಜಾಗೃತಿ ವಹಿಸಬೇಕು.. ಆತಂಕ ಪಡುವ ಅಗತ್ಯವಿಲ್ಲ ಎಂದು ಜಾಗೃತಿ ಮೂಡಿಸುವ ಬದಲಿಗೆ ಒಂದು ಧರ್ಮವನ್ನ ಪ್ರಚಾರ ಮಾಡಿಕೊಂಡು ತಿರುಗಾಡಿದ್ದಾರೆ.
क्या कोरोना वायरस को धर्म परिवर्तन का वायरस मार देगा ? हम तो डॉक्टर और हेल्थ वर्कर में ही भगवान देख रहे है परन्तु दवाई की जगह धर्म परिवर्तन की घुट्टी पिलाने वाले कतई बर्दास्त नही । 1/1@RSSorg@SuhasBhagatBJP@HitanandSharma @Ashutosh4BJP @anilscribe @rajneesh4n pic.twitter.com/ldSIz2Wlv2
— Rameshwar Sharma (@rameshwar4111) May 23, 2021
ಹೌದು.. ಗುತ್ತಿಗೆ ಮಹಿಳಾ ವೈದ್ಯೆಯೊಬ್ಬರು, ಕೊರೊನಾವೈರಸ್ ಸೋಂಕಿನಿಂದ ದೂರವಿರಲು, ಸಾಂಕ್ರಾಮಿಕದಿಂದ ಗುಣಮುಖರಾಗಲು ನಿರ್ದಿಷ್ಠ ಧರ್ಮವೊಂದರ ದೇವರನ್ನು ಪೂಜಿಸುವಂತೆ ಜನರಿಗೆ ಹೇಳುತ್ತಾ ಧರ್ಮ ಪ್ರಚಾರ ಮಾಡಿರುವ ಡಾಕ್ಟರ್ ವೀಡಿಯೋ ವೈರಲ್ ಆಗಿದೆ.
ಮಧ್ಯಪ್ರದೇಶದ ರಾಟ್ಲಾಂ ಜಿಲ್ಲೆಯ ಭಜ್ನಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಂಕ್ರಾಮಿಕ ರೋಗ ನಿಯಂತ್ರಣ ಅಭಿಯಾನ ವೇಳೆ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರಚಾರ ಮಾಡುತ್ತಿದ್ದ ಬಗ್ಗೆ ದೂರು ದಾಖಲಾಗಿದೆ. ಧಾರ್ಮಿಕ ಕರಪತ್ರಗಳು ಕೂಡಾ ಆ ಮಹಿಳೆ ಬಳಿ ಪತ್ತೆಯಾಗಿವೆ. ಹೀಗಾಗಿ ವರದಿ ತಯಾರಿಸಿ, ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ತಹಸೀಲ್ದಾರ್ ಬಿಎಸ್ ಠಾಕೂರ್ ಹೇಳಿದ್ದಾರೆ.
ಮಾಸ್ಕ್ ಧರಿಸಿರುವ ವೈದ್ಯೆ ಮಾತನಾಡುವ ದೃಶ್ಯ ವೀಡಿಯೋದಲ್ಲಿದೆ. ಯೇಸುವನ್ನು ಪ್ರಾರ್ಥಿಸುವುದರಿಂದ ಗುಣಮುಖರಾಗುವುದಾಗಿ ಆಕೆ ಹೇಳಿಕೊಂಡು ತಿರುಗಾಡಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ವಿಡಿಯೋದಲ್ಲಿ ಆಕೆ ಒಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿದ್ದು, ಆಕೆಗೆ ಮರುಪ್ರಶ್ನೆ ಹಾಕಿರುವ ಆ ವ್ಯಕ್ತಿ ಯಾಕೆ ಏಸುವನ್ನ ಪ್ರಾರ್ಥಿಸಿದ್ರೆ ಕೊರೊನಾ ದೂರಾಗುತ್ತೆ ಜನರಿಗೆ ಹೇಳುತ್ತಿದ್ದೀರಿ. ತಮ್ಮ ಸ್ವಂತ ಧರ್ಮದ ಪ್ರಾರ್ಥನೆ ಮಾಡುವಂತೆ ಜನರಿಗೆ ಯಾಕೆ ಹೇಳುತ್ತಿಲ್ಲ ಎಂದು ಕೇಳುತ್ತಾನೆ. ಆದಕ್ಕೆ ಪ್ರತಿಕ್ರಿಯಿಸುವ ಆ ಮಹಿಳೆ, ಯೇಸುವನ್ನು ಪ್ರಾರ್ಥಿಸುವುದರಿಂದ ಗುಣಮುಖರಾಗಿದ್ದಾಗಿ ಜನರು ಹೇಳುತ್ತಿದ್ದಾರೆ ಎಂದಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು , ಬಿಜೆಪಿ ನಾಯಕರು , ಹಿಂದೂ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದೆ. ತನಿಖೆ ನಂತರ ಕೇಸ್ ದಾಖಲಿಸಲಾಗುವುದು ಎಂದು ಭಜ್ನಾ ಪೊಲೀಸ್ ಠಾಣೆ ಉಸ್ತುವಾರಿ ದಿಲೀಪ್ ರಾಜೊರಿಯಾ ಹೇಳಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.