ಜಮೀನು ವಿವಾದ : ಯಶ್ ತಾಯಿ ಜೊತೆಗೆ ಗ್ರಾಮಸ್ಥರ ಫೈಟ್..!
ಹಾಸನ : ರಾಕಿಂಗ್ ಸ್ಟಾರ್ ಯಶ್ ಅವರ ತಂದೆ ತಾಯಿ ಹಾಗೂ ಗ್ರಾಮಸ್ಥರ ನಡುವೆ ಜಾಗದ ವಿಚಾರವಾಗಿ ಗಲಾಟೆ ನಡೆದಿರುವ ನಡೆದ ಘಟನೆ ಹಾಸನದ ತಿಮ್ಮೇನಹಳ್ಳಿಯಲ್ಲಿ ನಡೆದಿದೆ. ತಮ್ಮ ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ಯಶ್ ಕುಟುಂಬದವರ ಜೊತೆ ತಿಮ್ಮೇನಹಳ್ಳಿ ಗ್ರಾಮದವರು ಗಲಾಟೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಮಯೂರಿ ಹಾಟ್ ಲುಕ್ ನಲ್ಲಿ ಬೇಬಿ ಬಂಪ್ಸ್ ಫೋಟೋ ಶೂಟ್..!
ದುದ್ದ ಹೋಬಳಿ ತಿಮ್ಮೇನಹಳ್ಳಿ ಗ್ರಾಮದ ಬಳಿ ಯಶ್ ಜಮೀನು ಖರೀದಿಸಿದ್ದು, ತಮ್ಮ ಜಮೀನಿನಲ್ಲಿ ಕೆಲಸ ಮಾಡಿಸುತ್ತಿರುವಾಗ ಕಾಲು ದಾರಿ ವಿಚಾರವಾಗಿ ಗ್ರಾಮಸ್ಥರ ನಡುವೆ ಮಾತಿಗೆ ಮಾತು ಬೆಳೆದಿದೆ. ಯಶ್ ಅವರ ತಂದೆ ಅರುಣ್ ಕುಮಾರ್ ಮತ್ತು ತಾಯಿ ಪುಷ್ಪ ಇಬ್ಬರು ಜಮೀನಿಗೆ ರಸ್ತೆ ನಿರ್ಮಾಣ ಮಾಡಲು ಜೆಸಿಬಿಯಲ್ಲಿ ಕೆಲಸ ಮಾಡಿಸುತ್ತಿದ್ದ ವೇಳೆ ಗ್ರಾಮಸ್ಥರು ಅಡ್ಡಿ ಪಡಿಸಿದ್ದಾರೆ.
ಈ ವೇಳೆ ಯಶ್ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ಗಲಾಟೆ ಜೋರಾಗಿದ್ದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ದುದ್ದ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ. ದುದ್ದ ಪೊಲೀಸ್ ಠಾಣೆಗೆ ಪುಷ್ಪಾ ಅವರು ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಷ್ಟಗಳನ್ನೆಲ್ಲಾ ಮೆಟ್ಟಿ ರಿಲೀಸ್ ಆದ್ರೂ ‘ಹೀರೋ’ ಗೆ ಪೈರೆಸಿ ಹೊಡೆತ : ರಿಷಬ್ ಬೇಸರ..!