ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿಗೆ ಕೊರೊನಾ ಕಂಟಕ ಕಾಡುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ದಿನ ದಿಂದ ದಿನಕ್ಕೆ ರಭಸವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೆಲ ಪ್ರದೇಶಗಳನ್ನು ಲಾಕ್ ಡೌನ್ ಮತ್ತು ಸೀಲ್ ಡೌನ್ ಮಾಡಲಾಗಿದೆ. ಅದರೂ ಕೂಡಾ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿಲ್ಲ. ಹಾಗಾಗಿ ಬೆಂಗಳೂರನ್ನು ಲಾಕ್ ಡೌನ್ ಮಾಡಬೇಕಾ ಅಥಾವ ಬೇಡವಾ ಎಂಬುದನ್ನು ಚರ್ಚಿಸಲು ನಾಳೆ ಬೆಂಗಳೂರಿನ ಶಾಸಕರ ಸಭೆ ಕರೆಯಲಾಗಿದೆ.
ಕಂದಾಯ ಸಚಿವ ಅರ್. ಅಶೋಕ್ ನೇತೃತ್ವದಲ್ಲಿ ನಾಳೆ ಬೆಂಗಳೂರಿನ ಎಲ್ಲಾ ಶಾಸಕರು ಸಭೆ ಸೇರುತ್ತಾರೆ. ಪಕ್ಷ ಭೇದ ಮರೆತು ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗುತ್ತಾರೆ. ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು, ಜೊತೆಗೆ ಲಾಕ್ ಡೌನ್ ಒಂದೇ ಪರಿಹಾರನಾ ಎಂಬುದರು ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಒಂದು ವೇಳೆ ಬೆಂಗಳೂರಿನ ಎಲ್ಲಾ ಶಾಸಕರು ಲಾಕ್ ಡೌನ್ ಮಾಡಬೇಕು ಎಂಬ ಅಭಿಪ್ರಾಯ ನೀಡಿದರೇ ಲಾಕ್ ಡೌನ್ ಮಾಡುವುದು ಬಹುತೇಕ ಖಚಿತವಾಗುವ ಹಂತದಲ್ಲಿದೆ ಎಂದು ಮೂಲಗಳು ತಿಳಿದು ಬಂದಿದೆ.
ಆದರೆ ಈಗಾಗಲೇ ಬೆಂಗಳೂರಿನ ಕೆಲ ಶಾಸಕರು ಬೆಂಗಳೂರನಲ್ಲಿ ಲಾಕ್ ಡೌನ್ ಮಾಡಿ ಎಂದು ಹೇಳಿದ್ದಾರೆ. ಮಾಜಿ ಸಚಿವ ರಾಮಲಿಂಗರೆಡ್ಡಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪುತ್ತಿದೆ ಹಾಗಾಗಿ ಲಾಕ್ ಡೌನ್ ಮಾಡಿ ಎಂದು ಹೇಳಿದ್ದರು. ಹೀಗೆ ಕೆಲ ಶಾಸಕರು ಲಾಕ್ ಡೌನ್ ಮಾಡಿ ಎಂದು ಮೊದಲಿಂದಲೂ ಹೇಳಿದ್ದಾರೆ. ಆದರೆ ಅಂತಿಮ ನಿರ್ಧಾರ ನಾಳೆ ಹೊರ ಬೀಳಲಿದೆ.