ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಮತ್ತು ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಕೊನೆಗೂ ಕಾಲ ಕೂಡಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿಣಿ (CWC) ಸಭೆಗಾಗಿ ಬಿಹಾರಕ್ಕೆ ತೆರಳಿದ್ದ ಸಂದರ್ಭದಲ್ಲೇ, ಕಾಂಗ್ರೆಸ್ ಹೈಕಮಾಂಡ್ 39 ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿಗೆ ಅಂತಿಮ ಮುದ್ರೆ ಒತ್ತಿದ್ದು, ರಾಜ್ಯಕ್ಕೆ ರವಾನಿಸಿದೆ.
ಈ ನೇಮಕಾತಿ ಪಟ್ಟಿಯು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಹಲವು ನಾಯಕರಿಗೆ ಸ್ಥಾನಮಾನ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ. ಬಹು ನಿರೀಕ್ಷಿತ ಈ ಪಟ್ಟಿಯಲ್ಲಿ ಅಚ್ಚರಿಯ ಆಯ್ಕೆಯೊಂದು ಗಮನ ಸೆಳೆದಿದೆ. ಹತ್ಯೆ ಪ್ರಕರಣವೊಂದರಲ್ಲಿ ಜೈಲು ಸೇರಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಂತಹ ಪ್ರಮುಖ ಸಂಸ್ಥೆಯ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರಿಗೆ ಜಾಕ್ಪಾಟ್ ಹೊಡೆದಿದೆ.
ಪಕ್ಷದ ಹಲವು ಹಿರಿಯ ಹಾಗೂ ಕಿರಿಯ ಮುಖಂಡರಿಗೆ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಅವಕಾಶ ನೀಡುವ ಮೂಲಕ ಅಧಿಕಾರವನ್ನು ವಿಕೇಂದ್ರೀಕರಿಸಲು ಮತ್ತು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಸರ್ಕಾರ ಮುಂದಾಗಿದೆ.
ನೂತನವಾಗಿ ನೇಮಕಗೊಂಡ ಅಧ್ಯಕ್ಷರ ಸಂಪೂರ್ಣ ಪಟ್ಟಿ ಹೀಗಿದೆ:
* ಶಿವಲೀಲಾ ಕುಲಕರ್ಣಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
* ಪಿ. ರಘು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗ
* ಅರುಣ್ ಪಾಟೀಲ್: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ
* ಜಗದೀಶ್ ವೊಡ್ನಾಲ್: ಕರ್ನಾಟಕ ಜೈವಿಕ ವೈವಿಧ್ಯ ಮಂಡಳಿ
* ಮುರಳಿ ಅಶೋಕ್: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
* ಡಾ. ಮೂರ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ
* ಕರ್ನಲ್ ಮಲ್ಲಿಕಾರ್ಜುನ್: ಮಾಜಿ ಸೈನಿಕರ ಕಲ್ಯಾಣ ಮಂಡಳಿ
* ಡಾ. ಬಿ. ಸಿ. ಮುದ್ದುಗಂಗಾಧರ್: ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ
* ಶರ್ಲೆಟ್ ಪಿಂಟೋ: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ
* ಮರಿಯೋಜಿ ರಾವ್: ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ
* ಎಂ. ಎ. ಗಫೂರ್: ಕರಾವಳಿ ಅಭಿವೃದ್ಧಿ ಪ್ರಾಧಿಕಾರ
* ಕೆ. ಹರೀಶ್ ಕುಮಾರ್: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM)
* ಎನ್. ಸಂಪಂಗಿ: ಕರ್ನಾಟಕ ಗೋದಾಮು ನಿಗಮ
* ವೈ. ಸಯೀದ್ ಅಹಮದ್: ದೇವರಾಜ್ ಅರಸ್ ಟ್ರಕ್ ಟರ್ಮಿನಲ್
* ಮಹೇಶ್: ಕಾಡುಗೊಲ್ಲ ಅಭಿವೃದ್ಧಿ ನಿಗಮ
* ಮಂಜಪ್ಪ: ಬಯಲುಸೀಮೆ ಅಭಿವೃದ್ಧಿ ಮಂಡಳಿ
* ಧರ್ಮಣ್ಣ ಉಪ್ಪಾರ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
* ಅಗಾ ಸುಲ್ತಾನ್: ಸೆಂಟ್ರಲ್ ರಿಲೀಫ್ ಕಮಿಟಿ
* ಎಸ್. ಜಿ. ನಂಜಯ್ಯನಮಠ: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC)
* ಆಂಜಪ್ಪ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
* ನೀಲಕಂಠ ಮುಲ್ಗೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)
* ಬಾಬು ಹೊನ್ನ ನಾಯ್ಕ್: ಕಮಾಂಡ್ ಏರಿಯಾ ಡೆವಲಪ್ಮೆಂಟ್ ಅಥಾರಿಟಿ (CADA), ಭದ್ರಾ, ಹಗರಿಬೊಮ್ಮನಹಳ್ಳಿ, ಕಲಬುರ್ಗಿ
* ಯುವರಾಜ್ ಕದಮ್: ಮಲಪ್ರಭಾ ಮತ್ತು ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಬೆಳಗಾವಿ
* ಜಮಾದಾರ್ ಅನಿಲ್ ಕುಮಾರ್: ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ, ಕಲಬುರ್ಗಿ
* ಪ್ರವೀಣ್ ಹರ್ವಾಲ್: ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (GESCOM)
* ಮಂಜುನಾಥ್ ಪೂಜಾರಿ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ
* ಸೈಯದ್ ಮೆಹಮೂದ್ ಚಿಸ್ತಿ: ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ
* ಎಂ. ಎಸ್. ಮುತ್ತುರಾಜ್: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
* ನಂಜಪ್ಪ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
* ವಿಶ್ವಾಸ ದಾಸ್: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ
* ಆರ್. ಸತ್ಯನಾರಾಯಣ: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ
* ಗಂಗಾಧರ್: ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
* ಶಿವಪ್ಪ: ಹಾಸನ ನಗರಾಭಿವೃದ್ಧಿ ಪ್ರಾಧಿಕಾರ (HUDA)
* ಬಿ.ಎಸ್. ಕವಲಗಿ: ಕರ್ನಾಟಕ ಸುಣ್ಣದ ಕಲ್ಲು ಅಭಿವೃದ್ಧಿ ಮಂಡಳಿ
* ಶ್ರೀನಿವಾಸ ವೇಲು: ಕುಂಬಾರ ಅಭಿವೃದ್ಧಿ ನಿಗಮ
* ಟಿ.ಎಂ. ಶಾಹೀದ್ ತಕ್ಕಿಲ್: ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ
* ಚೇತನ್ ಕೆ. ಗೌಡ: ಕರ್ನಾಟಕ ರಾಜ್ಯ ಕೈಮಗ್ಗ ಮೂಲಸೌಕರ್ಯ (ವಿದ್ಯುತ್ ಮಗ್ಗ) ಮಂಡಳಿ
* ಶರಣಪ್ಪ ಸಾರದ್ಪುರ್: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ
* ಲಾವಣ್ಯ ಬಲ್ಲಾಳ್ ಜೈನ್: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆ








