ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಂದು ಕೇಂದ್ರ ಬಜೆಟ್ 2021-22 : ಈ ಬಾರಿಯ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ?

Shwetha by Shwetha
February 1, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Union budget
Share on FacebookShare on TwitterShare on WhatsappShare on Telegram

ಇಂದು ಕೇಂದ್ರ ಬಜೆಟ್ 2021-22 : ಈ ಬಾರಿಯ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ?

ಹೊಸದಿಲ್ಲಿ, ಫೆಬ್ರವರಿ01: ಕೊರೋನಾ ಸಾಂಕ್ರಾಮಿಕದಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತನ್ನ ಮೂರನೇ ಮತ್ತು ಬಹುಶಃ ಅತ್ಯಂತ ಸವಾಲಿನ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ.
ಒಂದೆಡೆ ಕೊರೋನಾ ಸಂಕಷ್ಟದಿಂದ ದೇಶದ ಅರ್ಥಿಕತೆ ಕುಸಿದಿದ್ದು, ಅನೇಕ ಮಂದಿ ಉದ್ಯೋಗವನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರೆ ಮತ್ತೊಂದೆಡೆ ಕೃಷಿ ಬಿಲ್ ವಿರೋಧಿಸಿ ದೇಶಾದ್ಯಂತ ರೈತರ ಭಾರೀ ವಿರೋಧ ವ್ಯಕ್ತವಾಗಿದೆ.

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Union budget

ಇಂತಹ ಸವಾಲಿನ ಸಮಯದಲ್ಲಿ ದೇಶವಾಸಿಗರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಲಿರುವ ಬಜೆಟ್ ನಿಂದ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಜನಸಾಮಾನ್ಯರು, ಕಂಪನಿಗಳು, ವ್ಯಾಪಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಬಜೆಟ್‌ನಲ್ಲಿ ಅನೇಕ ಮಹತ್ವದ ಘೋಷಣೆಗಳನ್ನು ನಿರೀಕ್ಷಿಸುತ್ತಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ಸಂಸತ್ತಿನಲ್ಲಿ ತನ್ನ ಬಜೆಟ್ ಭಾಷಣ ಮಾಡಲಿದ್ದಾರೆ. ಭಾಷಣ ಮಾಡಿದ ನಂತರ ಉಳಿದ ಬಜೆಟ್ ದಾಖಲೆಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ಬಜೆಟ್ ಭಾಷಣದ ಭಾಗ ಯಾವುದು?

ಸಾಂಪ್ರದಾಯಿಕವಾಗಿ, ಬಜೆಟ್ ಭಾಷಣವು ಎರಡು ಭಾಗಗಳನ್ನು ಒಳಗೊಂಡಿದೆ. ಭಾಗ ಎ ಯಲ್ಲಿ ಹಣಕಾಸು ಸಚಿವರು ಆರ್ಥಿಕತೆಯ ಮೌಲ್ಯಮಾಪನವನ್ನು ಪ್ರಸ್ತುತಪಡಿಸುತ್ತಾರೆ ಮತ್ತು ಮುಂಬರುವ ಹಣಕಾಸು ವರ್ಷದಲ್ಲಿ ಸರ್ಕಾರವು ಕೈಗೊಳ್ಳಲು ಯೋಜಿಸಿರುವ ವಿವಿಧ ಸುಧಾರಣೆಗಳನ್ನು ಪಟ್ಟಿ ಮಾಡುತ್ತಾರೆ.

ಈ ವರ್ಷ, ಸಾಂಕ್ರಾಮಿಕದಿಂದ ಉಂಟಾದ ಆರ್ಥಿಕ ಪರಿಣಾಮಗಳನ್ನು ಎದುರಿಸಲು ಘೋಷಿಸಲಾದ ಆತ್ಮನಿರ್ಭರ್ ಪ್ಯಾಕೇಜ್ ಅನ್ನು ಸರ್ಕಾರ ನಿಭಾಯಿಸಲು ಬಜೆಟ್ ಭಾಷಣವು ಸಮಯವನ್ನು ವಿನಿಯೋಗಿಸುವ ಸಾಧ್ಯತೆಯಿದೆ.

ಭಾಷಣದ ಭಾಗ ಬಿ ಆದಾಯ ತೆರಿಗೆ, ವಿನಾಯಿತಿ ಮಿತಿಗಳು, ಸೆಕ್ಷನ್ 80 (ಸಿ) ಅಡಿಯಲ್ಲಿ ಉಳಿತಾಯ ಮತ್ತು ಯಾವುದೇ ಕಡಿತಗಳನ್ನು ಒಳಗೊಂಡಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ನಿಬಂಧನೆಗಳಲ್ಲಿ ನಿರ್ದಿಷ್ಟ ಬದಲಾವಣೆಗಳನ್ನು ಹೊಂದಿದೆ.

ಬಂಡವಾಳ ಲಾಭದ ತೆರಿಗೆಗೆ ಯಾವುದೇ ಬದಲಾವಣೆಗಳನ್ನು ಬಜೆಟ್ ಭಾಷಣದ ಈ ಭಾಗದಲ್ಲಿಯೂ ಸಹ ನಿಭಾಯಿಸಲಾಗುತ್ತದೆ. ಪರೋಕ್ಷ ತೆರಿಗೆಯ ಪ್ರಮುಖ ಬದಲಾವಣೆಗಳು ಮತ್ತು ತಾರ್ಕಿಕತೆಯೂ ಈ ವಿಭಾಗದ ಭಾಗವಾಗಿದೆ. ಇವು ಮುಖ್ಯವಾಗಿ ಆಮದು ಮಾಡಿದ ಸರಕುಗಳ ಕಸ್ಟಮ್ ಸುಂಕ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ನಂತಹ ವಸ್ತುಗಳ ಮೇಲಿನ ಅಬಕಾರಿ ಸುಂಕದ ಬದಲಾವಣೆಗಳನ್ನು ಒಳಗೊಂಡಿರುತ್ತವೆ.

ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹಿಂದೆಂದೂ ಕಂಡರಿಯದ ಮುಂಗಡಪತ್ರವನ್ನು ಮಂಡಿಸುವುದಾಗಿ ಹೇಳಿ ಕೊರೋನಾ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿದ ಆರ್ಥಿಕತೆಯ ಚೇತರಿಕೆಗೆ ಕಠಿಣ ಸುಧಾರಣಾ ಕ್ರಮಗಳನ್ನು ಘೋಷಿಸುವ ಸುಳಿವು ನೀಡಿದ್ದಾರೆ.

ಕೇಂದ್ರ ಬಜೆಟ್ 2021-22ರಲ್ಲಿ ರೈಲ್ವೆ ಕ್ಷೇತ್ರದ ನಿರೀಕ್ಷೆಗಳು ಯಾವುವು?

ಹಾಗಾದರೆ ಈ ಬಾರಿಯ ಬಜೆಟ್‌ನಲ್ಲಿ ಯಾವೆಲ್ಲಾ ಘೋಷಣೆಗಳಾಗಬಹುದು ಎಂದು ನಿರೀಕ್ಷಿಸಬಹುದಾಗಿದೆ?

ರೈತರ ಪ್ರತಿಭಟನೆ ಗಮನದಲ್ಲಿಟ್ಟುಕೊಂಡು ರೈತರ ಹಿತದೃಷ್ಟಿಯಿಂದ ಸರ್ಕಾರ ಕೃಷಿ ಕ್ಷೇತ್ರಕ್ಕೆ ‌ಸಂಬಂಧಿಸಿ ಕೆಲವು ಪ್ರಮುಖ ಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ‌ಇದೆ.

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಅನೇಕ ಪ್ರಮುಖ ಘೋಷಣೆಗಳನ್ನು ಈ ಬಾರಿ ನಿರೀಕ್ಷಿಸಬಹುದಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ‌ಆನ್‌ಲೈನ್ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರವು ತಂತ್ರಜ್ಞಾನವನ್ನು ಮತ್ತಷ್ಟು ನವೀಕರಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ‌ಅಂದಾಜಿಸಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಅನುದಾನವನ್ನು ದ್ವಿಗುಣಗೊಳಿಸುವ ಸಾಧ್ಯತೆ ಇದೆ.

ವೈದ್ಯಕೀಯ ಸಿಬ್ಬಂದಿ ಸಂಖ್ಯೆ ಹೆಚ್ಚಳ, ಆರೋಗ್ಯ ವಿಮೆಯಲ್ಲಿ ವಿನಾಯಿತಿ, ಸಣ್ಣ ಪಟ್ಟಣಗಳು ​​ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಉತ್ತೇಜಿಸಲು ಒತ್ತು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಇಂಧನ, ಗಣಿಗಾರಿಕೆ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣ ಮತ್ತು ಎಲ್‌ಐಸಿಯಂತಹ ಬೃಹತ್ ಕಂಪನಿಗಳ ಅಲ್ಪ ಪ್ರಮಾಣದ ಪಾಲು ಮಾರಾಟ ಮಾಡುವ ಮೂಲಕ 4,000 ಕೋಟಿ ಡಾಲರ್ ಸಂಗ್ರಹಿಸುವ ಗುರಿಯನ್ನು ನಿರೀಕ್ಷಿಸಲಾಗಿದೆ.
Union budget

ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ 50ಕ್ಕೂ ಹೆಚ್ಚು ವಸ್ತುಗಳ ಮೇಲೆ ಆಮದು ತೆರಿಗೆಯನ್ನು ಶೇ 5ರಿಂದ 10ರಷ್ಟು ಹೆಚ್ಚಿಸುವ ಸಾಧ್ಯತೆ ‌ಇದೆ.

ಆತ್ಮನಿರ್ಭರ್ ಅಭಿಯಾನ ಮತ್ತು ದೇಶೀಯ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹ ನೀಡುವ ಸಲುವಾಗಿ ಪ್ರಮುಖ ಕ್ರಮಗಳನ್ನು ಪ್ರಕಟಿಸಬಹುದು ಎಂದು ‌ನಿರೀಕ್ಷಿಸಲಾಗಿದೆ.

ದೇಶೀಯ ಉತ್ಪಾದನೆ ಹೆಚ್ಚಿಸಲು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮತ್ತು ‌ಕಚ್ಚಾ ವಸ್ತುಗಳನ್ನು ಅಗ್ಗವಾಗಿಸಲು ಆಮದು ಸುಂಕದ ‌ಕಡಿತ ಮಾಡಬಹುದು.

ರೈಲ್ವೆಗಾಗಿ ಹಣಕಾಸು ಸಚಿವರು ಸುಮಾರು 1.79 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಬಹುದೆಂದು ಅಂದಾಜಿಸಲಾಗಿದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ನಿರ್ಣಾಯಕ ಪ್ರದೇಶಗಳನ್ನು ಸಂಪರ್ಕಿಸುವಂತಹ ಕೆಲವು ಹೈಸ್ಪೀಡ್ ರೈಲುಗಳನ್ನು ಮತ್ತು ಬುಲೆಟ್ ರೈಲಿನಲ್ಲಿ ವಿಸ್ತರಣೆ ಯೋಜನೆಯನ್ನು ಹಣಕಾಸು ಸಚಿವರು ಪ್ರಕಟಿಸುವ ನಿರೀಕ್ಷೆಯಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

https://twitter.com/SaakshaTv/status/1355543939978199042?s=19

https://twitter.com/SaakshaTv/status/1355543729679949830?s=19

Tags: finance ministerunion budget
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram