ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಇಂದು ಕೇಂದ್ರ ಬಜೆಟ್ 2021-22 : ಈ ಬಾರಿಯ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ?

Shwetha by Shwetha
February 1, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Union budget
Share on FacebookShare on TwitterShare on WhatsappShare on Telegram

ಇಂದು ಕೇಂದ್ರ ಬಜೆಟ್ 2021-22 : ಈ ಬಾರಿಯ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ?

ಹೊಸದಿಲ್ಲಿ, ಫೆಬ್ರವರಿ01: ಕೊರೋನಾ ಸಾಂಕ್ರಾಮಿಕದಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತನ್ನ ಮೂರನೇ ಮತ್ತು ಬಹುಶಃ ಅತ್ಯಂತ ಸವಾಲಿನ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ.
ಒಂದೆಡೆ ಕೊರೋನಾ ಸಂಕಷ್ಟದಿಂದ ದೇಶದ ಅರ್ಥಿಕತೆ ಕುಸಿದಿದ್ದು, ಅನೇಕ ಮಂದಿ ಉದ್ಯೋಗವನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರೆ ಮತ್ತೊಂದೆಡೆ ಕೃಷಿ ಬಿಲ್ ವಿರೋಧಿಸಿ ದೇಶಾದ್ಯಂತ ರೈತರ ಭಾರೀ ವಿರೋಧ ವ್ಯಕ್ತವಾಗಿದೆ.

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Union budget

ಇಂತಹ ಸವಾಲಿನ ಸಮಯದಲ್ಲಿ ದೇಶವಾಸಿಗರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಲಿರುವ ಬಜೆಟ್ ನಿಂದ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಜನಸಾಮಾನ್ಯರು, ಕಂಪನಿಗಳು, ವ್ಯಾಪಾರಿಗಳು ಸೇರಿದಂತೆ ಪ್ರತಿಯೊಬ್ಬರೂ ಬಜೆಟ್‌ನಲ್ಲಿ ಅನೇಕ ಮಹತ್ವದ ಘೋಷಣೆಗಳನ್ನು ನಿರೀಕ್ಷಿಸುತ್ತಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ಸಂಸತ್ತಿನಲ್ಲಿ ತನ್ನ ಬಜೆಟ್ ಭಾಷಣ ಮಾಡಲಿದ್ದಾರೆ. ಭಾಷಣ ಮಾಡಿದ ನಂತರ ಉಳಿದ ಬಜೆಟ್ ದಾಖಲೆಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ಬಜೆಟ್ ಭಾಷಣದ ಭಾಗ ಯಾವುದು?

ಸಾಂಪ್ರದಾಯಿಕವಾಗಿ, ಬಜೆಟ್ ಭಾಷಣವು ಎರಡು ಭಾಗಗಳನ್ನು ಒಳಗೊಂಡಿದೆ. ಭಾಗ ಎ ಯಲ್ಲಿ ಹಣಕಾಸು ಸಚಿವರು ಆರ್ಥಿಕತೆಯ ಮೌಲ್ಯಮಾಪನವನ್ನು ಪ್ರಸ್ತುತಪಡಿಸುತ್ತಾರೆ ಮತ್ತು ಮುಂಬರುವ ಹಣಕಾಸು ವರ್ಷದಲ್ಲಿ ಸರ್ಕಾರವು ಕೈಗೊಳ್ಳಲು ಯೋಜಿಸಿರುವ ವಿವಿಧ ಸುಧಾರಣೆಗಳನ್ನು ಪಟ್ಟಿ ಮಾಡುತ್ತಾರೆ.

ಈ ವರ್ಷ, ಸಾಂಕ್ರಾಮಿಕದಿಂದ ಉಂಟಾದ ಆರ್ಥಿಕ ಪರಿಣಾಮಗಳನ್ನು ಎದುರಿಸಲು ಘೋಷಿಸಲಾದ ಆತ್ಮನಿರ್ಭರ್ ಪ್ಯಾಕೇಜ್ ಅನ್ನು ಸರ್ಕಾರ ನಿಭಾಯಿಸಲು ಬಜೆಟ್ ಭಾಷಣವು ಸಮಯವನ್ನು ವಿನಿಯೋಗಿಸುವ ಸಾಧ್ಯತೆಯಿದೆ.

ಭಾಷಣದ ಭಾಗ ಬಿ ಆದಾಯ ತೆರಿಗೆ, ವಿನಾಯಿತಿ ಮಿತಿಗಳು, ಸೆಕ್ಷನ್ 80 (ಸಿ) ಅಡಿಯಲ್ಲಿ ಉಳಿತಾಯ ಮತ್ತು ಯಾವುದೇ ಕಡಿತಗಳನ್ನು ಒಳಗೊಂಡಂತೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ನಿಬಂಧನೆಗಳಲ್ಲಿ ನಿರ್ದಿಷ್ಟ ಬದಲಾವಣೆಗಳನ್ನು ಹೊಂದಿದೆ.

ಬಂಡವಾಳ ಲಾಭದ ತೆರಿಗೆಗೆ ಯಾವುದೇ ಬದಲಾವಣೆಗಳನ್ನು ಬಜೆಟ್ ಭಾಷಣದ ಈ ಭಾಗದಲ್ಲಿಯೂ ಸಹ ನಿಭಾಯಿಸಲಾಗುತ್ತದೆ. ಪರೋಕ್ಷ ತೆರಿಗೆಯ ಪ್ರಮುಖ ಬದಲಾವಣೆಗಳು ಮತ್ತು ತಾರ್ಕಿಕತೆಯೂ ಈ ವಿಭಾಗದ ಭಾಗವಾಗಿದೆ. ಇವು ಮುಖ್ಯವಾಗಿ ಆಮದು ಮಾಡಿದ ಸರಕುಗಳ ಕಸ್ಟಮ್ ಸುಂಕ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ನಂತಹ ವಸ್ತುಗಳ ಮೇಲಿನ ಅಬಕಾರಿ ಸುಂಕದ ಬದಲಾವಣೆಗಳನ್ನು ಒಳಗೊಂಡಿರುತ್ತವೆ.

ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಹಿಂದೆಂದೂ ಕಂಡರಿಯದ ಮುಂಗಡಪತ್ರವನ್ನು ಮಂಡಿಸುವುದಾಗಿ ಹೇಳಿ ಕೊರೋನಾ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿದ ಆರ್ಥಿಕತೆಯ ಚೇತರಿಕೆಗೆ ಕಠಿಣ ಸುಧಾರಣಾ ಕ್ರಮಗಳನ್ನು ಘೋಷಿಸುವ ಸುಳಿವು ನೀಡಿದ್ದಾರೆ.

ಕೇಂದ್ರ ಬಜೆಟ್ 2021-22ರಲ್ಲಿ ರೈಲ್ವೆ ಕ್ಷೇತ್ರದ ನಿರೀಕ್ಷೆಗಳು ಯಾವುವು?

ಹಾಗಾದರೆ ಈ ಬಾರಿಯ ಬಜೆಟ್‌ನಲ್ಲಿ ಯಾವೆಲ್ಲಾ ಘೋಷಣೆಗಳಾಗಬಹುದು ಎಂದು ನಿರೀಕ್ಷಿಸಬಹುದಾಗಿದೆ?

ರೈತರ ಪ್ರತಿಭಟನೆ ಗಮನದಲ್ಲಿಟ್ಟುಕೊಂಡು ರೈತರ ಹಿತದೃಷ್ಟಿಯಿಂದ ಸರ್ಕಾರ ಕೃಷಿ ಕ್ಷೇತ್ರಕ್ಕೆ ‌ಸಂಬಂಧಿಸಿ ಕೆಲವು ಪ್ರಮುಖ ಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ‌ಇದೆ.

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಅನೇಕ ಪ್ರಮುಖ ಘೋಷಣೆಗಳನ್ನು ಈ ಬಾರಿ ನಿರೀಕ್ಷಿಸಬಹುದಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ‌ಆನ್‌ಲೈನ್ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರವು ತಂತ್ರಜ್ಞಾನವನ್ನು ಮತ್ತಷ್ಟು ನವೀಕರಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ‌ಅಂದಾಜಿಸಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಅನುದಾನವನ್ನು ದ್ವಿಗುಣಗೊಳಿಸುವ ಸಾಧ್ಯತೆ ಇದೆ.

ವೈದ್ಯಕೀಯ ಸಿಬ್ಬಂದಿ ಸಂಖ್ಯೆ ಹೆಚ್ಚಳ, ಆರೋಗ್ಯ ವಿಮೆಯಲ್ಲಿ ವಿನಾಯಿತಿ, ಸಣ್ಣ ಪಟ್ಟಣಗಳು ​​ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಉತ್ತೇಜಿಸಲು ಒತ್ತು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.

ಇಂಧನ, ಗಣಿಗಾರಿಕೆ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣ ಮತ್ತು ಎಲ್‌ಐಸಿಯಂತಹ ಬೃಹತ್ ಕಂಪನಿಗಳ ಅಲ್ಪ ಪ್ರಮಾಣದ ಪಾಲು ಮಾರಾಟ ಮಾಡುವ ಮೂಲಕ 4,000 ಕೋಟಿ ಡಾಲರ್ ಸಂಗ್ರಹಿಸುವ ಗುರಿಯನ್ನು ನಿರೀಕ್ಷಿಸಲಾಗಿದೆ.
Union budget

ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ 50ಕ್ಕೂ ಹೆಚ್ಚು ವಸ್ತುಗಳ ಮೇಲೆ ಆಮದು ತೆರಿಗೆಯನ್ನು ಶೇ 5ರಿಂದ 10ರಷ್ಟು ಹೆಚ್ಚಿಸುವ ಸಾಧ್ಯತೆ ‌ಇದೆ.

ಆತ್ಮನಿರ್ಭರ್ ಅಭಿಯಾನ ಮತ್ತು ದೇಶೀಯ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹ ನೀಡುವ ಸಲುವಾಗಿ ಪ್ರಮುಖ ಕ್ರಮಗಳನ್ನು ಪ್ರಕಟಿಸಬಹುದು ಎಂದು ‌ನಿರೀಕ್ಷಿಸಲಾಗಿದೆ.

ದೇಶೀಯ ಉತ್ಪಾದನೆ ಹೆಚ್ಚಿಸಲು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮತ್ತು ‌ಕಚ್ಚಾ ವಸ್ತುಗಳನ್ನು ಅಗ್ಗವಾಗಿಸಲು ಆಮದು ಸುಂಕದ ‌ಕಡಿತ ಮಾಡಬಹುದು.

ರೈಲ್ವೆಗಾಗಿ ಹಣಕಾಸು ಸಚಿವರು ಸುಮಾರು 1.79 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಬಹುದೆಂದು ಅಂದಾಜಿಸಲಾಗಿದೆ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ನಿರ್ಣಾಯಕ ಪ್ರದೇಶಗಳನ್ನು ಸಂಪರ್ಕಿಸುವಂತಹ ಕೆಲವು ಹೈಸ್ಪೀಡ್ ರೈಲುಗಳನ್ನು ಮತ್ತು ಬುಲೆಟ್ ರೈಲಿನಲ್ಲಿ ವಿಸ್ತರಣೆ ಯೋಜನೆಯನ್ನು ಹಣಕಾಸು ಸಚಿವರು ಪ್ರಕಟಿಸುವ ನಿರೀಕ್ಷೆಯಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

https://twitter.com/SaakshaTv/status/1355543939978199042?s=19

https://twitter.com/SaakshaTv/status/1355543729679949830?s=19

Tags: finance ministerunion budget
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram