ತಮಿಳುನಾಡದಲ್ಲಿ ಪಕ್ಷ ಬಲವರ್ಧನೆಗಾಗಿ ಕನ್ನಡಿಗರಿಗೆ ಬಿಜೆಪಿ ದ್ರೋಹ : ಸಿದ್ದರಾಮಯ್ಯ
ಬೆಂಗಳೂರು : ತಮಿಳುನಾಡಿನಲ್ಲಿ ಬಿಜೆಪಿಯ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೇಕೆದಾಟು ಪಾದಯಾತ್ರೆ ವೇಳೆ ಕೊರೊನಾ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಮೇಲೆ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಗಳ ಮೂಲಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ನಲ್ಲಿ….
ಮೇಕೆದಾಟು ಯೋಜನೆ ಜಾರಿಯಾಗಿ ಎರಡೂವರೆ ಕೋಟಿ ಕನ್ನಡಿಗರಿಗೆ ಅನುಕೂಲವಾಗಲಿ ಎಂದು ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಪಾದಯಾತ್ರೆಯಿಂದ ಜನ ಜಾಗೃತರಾಗುತ್ತಾರೆಂದು ಹೆದರಿ ನಾನೂ ಸೇರಿದಂತೆ ಪಕ್ಷದ 30 ಜನರ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಪ್ರಕರಣ ದಾಖಲಿಸಿದೆ.
ಕೊರೊನಾ ತಡೆಗಟ್ಟುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದ್ದರೆ ಸುಭಾಷ್ ಗುತ್ತೇದಾರ್, ರೇಣುಕಾಚಾರ್ಯ ಮೇಲೂ ಕೇಸು ದಾಖಲಾಗಬೇಕಿತ್ತು ಅಲ್ಲವೇ? ನಮ್ಮ ಮೇಲೆ ಮಾತ್ರ ಕಾನೂನು ಕ್ರಮ ಏಕೆ? ಸರ್ಕಾರ ಇನ್ನೂ ಎಷ್ಟು ಕೇಸು ದಾಖಲಿಸುತ್ತದೋ ದಾಖಲಿಸಲಿ, ಎಲ್ಲದಕ್ಕೂ ನಾವು ಕಾನೂನಿನ ಮೂಲಕವೇ ಉತ್ತರ ನೀಡುತ್ತೇವೆ.
ತಮಿಳುನಾಡಿನಲ್ಲಿ ಬಿಜೆಪಿಯ ಬಲವರ್ಧನೆಗಾಗಿ ರಾಜ್ಯ @BJP4Karnataka ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ. ಪಾದಯಾತ್ರೆ ನಡೆದರೆ ತಮ್ಮ ಈ ಮೋಸ ಬಯಲಾಗಬಹುದು ಎಂಬ ಭಯ ಬಿಜೆಪಿಯವರನ್ನು ಕಾಡಲು ಆರಂಭವಾಗಿದೆ. 3/3#Mekedatu
— Siddaramaiah (@siddaramaiah) January 11, 2022
ತಮಿಳುನಾಡಿನಲ್ಲಿ ಬಿಜೆಪಿಯ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ. ಪಾದಯಾತ್ರೆ ನಡೆದರೆ ತಮ್ಮ ಈ ಮೋಸ ಬಯಲಾಗಬಹುದು ಎಂಬ ಭಯ ಬಿಜೆಪಿಯವರನ್ನು ಕಾಡಲು ಆರಂಭವಾಗಿದೆ.
ಪಾದಯಾತ್ರೆಯನ್ನು ತಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಬಿಜೆಪಿ ಸರ್ಕಾರದಿಂದ ನಡೆಯುತ್ತಿದೆ. ಸರ್ಕಾರದ ಯಾವುದೇ ಬೆದರಿಕೆ ತಂತ್ರಗಳಿಗೆ ನಾವು ಮಣಿಯದೆ, ಹನ್ನೊಂದು ದಿನಗಳ ಕಾಲ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.