Fire accident-ವಾರಣಾಸಿ: ಉತ್ತರ ಪ್ರದೇಶದ ಭದೋಹಿಯಲ್ಲಿ ದುರ್ಗಾಪೂಜಾ ಪೆಂಡಾಲ್ ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದು, 66 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಸಪ್ತಮಿ’ ಅಥವಾ ನವರಾತ್ರಿ ಉತ್ಸವದ ಏಳನೇ ದಿನದಂದು ಪೂಜೆ ಮಂಟಪದಲ್ಲಿ ಆರತಿ ನಡೆಸುತ್ತಿದ್ದಾಗ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯ ಸಮಯದಲ್ಲಿ ಸುಮಾರು 150 ಜನರು ಪೆಂಡಾಲ್ ನಲ್ಲಿ ಇದ್ದವರು ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೆರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹ್ಯಾಲೊಜೆನ್ ಲೈಟ್ ಅತಿಯಾಗಿ ಬಿಸಿಯಾಗುವುದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
“ಪಂಂಡಲ್ನಲ್ಲಿರುವ ಹ್ಯಾಲೊಜೆನ್ ಲೈಟ್ ಅತಿಯಾಗಿ ಬಿಸಿಯಾಯಿತು, ಅದರ ನಂತರ ವಿದ್ಯುತ್ ತಂತಿಯು ಏಕಕಾಲದಲ್ಲಿ ಅನೇಕ ಹಂತಗಳಲ್ಲಿ ಬೆಂಕಿ ಹೊತ್ತಿ ಕೊಂಡಿತು ಶೀಘ್ರದಲ್ಲೇ ಬೆಂಕಿ ಮರದ ಸ್ಕ್ಯಾಫೋಲ್ಡಿಂಗ್ ಮತ್ತು ಟೆಂಟ್ ಅನ್ನು ಆವರಿಸಿತು,” ಎಂದು ತಿಳಿಸಿದ್ದಾರೆ
“ಕಳೆದ ರಾತ್ರಿ ನಡೆದ ದುರ್ಘಟನೆಯಲ್ಲಿ 45 ವರ್ಷದ ಮಹಿಳೆ ಮತ್ತು 10 ವರ್ಷದ ಹುಡುಗ ಸಾವನ್ನಪ್ಪಿದ್ದರೆ, ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆ ಸಾವನ್ನಪ್ಪಿದ್ದಾರೆ” ಎಂದು ಶ್ರೀ ರಥಿ ತಿಳಿಸಿದ್ದಾರೆ.
ಔರೈ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿಯಾದ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.
ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.
ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಅಧಿಕಾರಿ ತಿಳಿಸಿದ್ದಾರೆ.