ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೀಪಾವಳಿಗೆ ಪಟಾಕಿ ಬ್ಯಾನ್: ಸಿಎಂ ಬಿಎಸ್‌ವೈ ಆದೇಶ, ಗ್ರೀನ್ ಪಟಾಕಿ ಓಕೆ..!

Kariyappa N by Kariyappa N
November 6, 2020
in Newsbeat, Politics, Samagra karnataka, ರಾಜ್ಯ
pataki ban
Share on FacebookShare on TwitterShare on WhatsappShare on Telegram

ಬೆಂಗಳೂರು: ದೀಪದ ಹಬ್ಬ ದೀಪಾವಳಿಗೆ ಇನ್ನೇನು ಒಂದು ವಾರ ಮಾತ್ರ ಬಾಕಿ ಇದೆ. ಆದರೆ, ಈ ಬಾರಿಯ ಹಬ್ಬಗಳ ಸಂಭ್ರಮವನ್ನು ಹೆಮ್ಮಾರಿ ಕೊರೊನಾ ಕಿತ್ತುಕೊಂಡಿದೆ. ಇದರ ಜತೆಗೆ ಈ ಬಾರಿಯ ದೀಪಾಳಿ ಹಬ್ಬದಲ್ಲಿ ಪಟಾಕಿ ಸಿಡಿಸುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

deepavali pataki
ಕೊರೊನಾ ಸೋಂಕಿತರು ಅದರಲ್ಲೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಪಟಾಕಿ ಶಬ್ಧ ಮತ್ತು ವಿಷಕಾರಿ ಹೊಗೆ ತೀವ್ರ ಪರಿಣಾಮ ಬೀರಲಿದೆ. ಇದರಿಂದ ಕೊರೊನಾ ಸಾವು-ನೋವು ಹೆಚ್ಚಳ ಆಗಬಹುದು. ಪಟಾಕಿ ಬ್ಯಾನ್ ಮಾಡುವುದು ಒಳಿತು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ತಜ್ಞರ ಸಲಹೆಗೆ ಮನ್ನಣೆ ನೀಡಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.
ದೀಪಾವಳಿ ಬೆಳಕಿನ ಹಬ್ಬ ಹೀಗಾಗಿ ದೀಪ ಬೆಳಗಿ, ಪಟಾಕಿ ಬೇಡ. ಬೇಕಿದ್ದರೆ ಮಾಲಿನ್ಯಕಾರಕವಲ್ಲದ ಹಸಿರು ಪಟಾಕಿ ಹಚ್ಚಿ ಎಂಬ ಸಂದೇಶವನ್ನು ಸಿಎಂ ಯಡಿಯೂರಪ್ಪ ರವಾನಿಸಿದ್ದಾರೆ.

Related posts

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

July 11, 2026
ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

July 11, 2026

ಹಸಿರು ಪಟಾಕಿ ಹಚ್ಚಲು ಗ್ರೀನ್ ಸಿಗ್ನಲ್
ದೀಪಾವಳಿ ಹಬ್ಬ ಅಂದರೆ, ಪಟಾಕಿ ಇಲ್ಲದೆ ಮಾಡಿದರೆ ಅದು ಹಬ್ಬವೇ ಅಲ್ಲ. ಬಾನೆತ್ತರಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸುವ ಮಜವೇ ಬೇರೆ. ಆದರೆ, ಈ ಬಾರಿ ಹೆಮ್ಮಾರಿ ಕೊರೊನಾ ವಕ್ಕರಿಸುವ ಕಾರಣ ಸಾಮಾನ್ಯ ಪಟಾಕಿ ಬದಲು ಹಸಿರು ಪಟಾಕಿ ಹಾರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ದೀಪಾವಳಿ ಹಬ್ಬ ಅಂದ್ರೆ ಒಂದಿಟ್ಟು ಪಟಾಕಿ ಹಚ್ಚಲೇಬೇಕು. ಹೀಗಾಗಿ ಮಾಲಿನ್ಯಕಾರಕವಲ್ಲದ ಹಸಿರು ಪಟಾಕಿ ಹಚ್ಚಲು ಮಾತ್ರ ಅವಕಾಶ ನೀಡಲಾಗಿದೆ. ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೊರೊನಾ ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹೆಚ್ಚು ಶಬ್ದವಲ್ಲದ, ಮಾಲಿನ್ಯವಲ್ಲದ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ.


ಕೊರೊನಾ ೨ನೇ ಅಲೆ ಅಪ್ಪಳಿಸೋದನ್ನು ತಡೆಯೋ ಸಲುವಾಗಿ ರಾಜ್ಯಾದ್ಯಂತ ಯಡಿಯೂರಪ್ಪ ಸರ್ಕಾರ ಪಟಾಕಿ ಬ್ಯಾನ್ ಮಾಡಿದೆ. ದೀಪಾವಳಿ ಹೊತ್ತಲ್ಲಿ ಪಟಾಕಿ ಮಾರಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡುವುದಾಗಲಿ ಅಥವಾ ಹೊಡೆಯುವುದಾಗಲಿ ಮಾಡುವಂತಿಲ್ಲ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಆದೇಶ ಹೊರಬೀಳಲಿದ್ದು, ಜಿಲ್ಲಾಡಳಿತಗಳಿಗೆ ಸುತ್ತೋಲೆ ರವಾನೆ ಆಗಲಿದೆ.

deepavali
ಈಗಾಗಲೇ ದೆಹಲಿ, ಒಡಿಶಾ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಟಾಕಿ ನಿಷೇಧ ಮಾಡಲಾಗಿದೆ. ಈ ಸಾಲಿಗೆ ಕರ್ನಾಟಕವೂ ಇದೀಗ ಸೇರಿದೆ. ಪಟಾಕಿಯಿಂದ ಮಾಲಿನ್ಯ ಹೆಚ್ಚಾಗಲಿದೆ. ಜೊತೆಗೆ ಚಳಿಗಾಲವೂ ಇರುವುದರಿಂದ ಸೋಂಕು ಹೆಚ್ಚಳವಾಗಬಹುದು. ಉಸಿರಾಟ ಸಮಸ್ಯೆ ಇರುವ ಸೋಂಕಿತರ ಸ್ಥಿತಿ ಗಂಭೀರ ಆಗಬಹುದು. ಹೀಗಾಗಿ ಪಟಾಕಿ ನಿಷೇಧ ಉತ್ತಮ ನಿರ್ಧಾರ ಎನ್ನುತ್ತಾರೆ ವೈದ್ಯರು.

ಕದ್ದು ಪಟಾಕಿ ಸಿಡಿಸಿದ್ರೆ ಹುಷಾರ್..?
ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಈ ಬಾರಿ ಸರಳ ದೀಪಾವಳಿ ಮಾಡಿ ಎಂದು ನಾಡಿನ ಜನರಿಗೆ ಕರೆ ನೀಡಿದ್ದಾರೆ. ಈ ವರ್ಷ ಯಾರೂ ಪಟಾಕಿ ಸಿಡಿಸದೆ ಅರ್ಥ ಪೂರ್ಣವಾಗಿ ಹಬ್ಬವನ್ನು ಆಚರಣೆ ಮಾಡಬೇಕಿದೆ. ಆರೋಗ್ಯದ ದೃಷ್ಟಿಯಿಂದ ಪಟಾಕಿ ನಿಷೇಧ ಮಾಡಲಾಗಿದೆ. ಜನರ ಸಂತೋಷವನ್ನು ದೂರ ಮಾಡಲು ನಾವು ಈ ಕ್ರಮಕೈಗೊಂಡಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿಯಿಂದ ನೀಡಿರುವ ವರದಿ ಅನ್ವಯ ದೀಪಾಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಲಾಗಿದೆ. ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ ವಹಿಸಲಾಗುವುದು. ಪಟಾಕಿ ಸಿಡಿಸುವುದನ್ನು ತಡೆಯಲು ನಿಯಮ ರೂಪಿಸುತ್ತೇವೆ. ಒಂದೆರಡು ದಿನಗಳಲ್ಲಿ ಪಟಾಕಿ ನಿಷೇಧದ ರೂಪುರೇಷೆಗಳನ್ನು ಅಂತಿಮಗೊಳಿಸುತ್ತೇವೆ. ಜನರು ಕೂಡ ಪಟಾಕಿ ನಿಷೇಧಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪಟಾಕಿ ಮಾರಾಟಗಾರರು ಕಂಗಾಲು
ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಅನುಮತಿ ಪಡೆದು, ಜಾಗಕ್ಕೆ ಬಾಡಿಗೆ ನೀಡಿ ಪಟಾಕಿ ಮಾರಾಟ ಮಾಡಲು ಮಳಿಗೆಗಳು ತೆರೆದಿರುವ ಮಾರಾಟಗಾರರು ರಾಜ್ಯ ಸರ್ಕಾರದ ನಿರ್ಧಾರದಿಂದ ಕಂಗಾಲಾಗಿದ್ದಾರೆ.
ಹಬ್ಬಕೆAದು ಲಕ್ಷಾಂತರ ರೂ. ದುಡ್ಡು ಹಾಕಿ ಖರೀದಿ ಮಾಡಿದ್ದೇವೆ. ಮಳಿಗೆಗಳನ್ನು ಪಡೆಯಲು ಮಂಗಡ ಹಣ ಕೊಟ್ಟು ಅಂಗಡಿ ತೆರೆದೂ ಆಗಿದೆ. ಇಂತಹ ಸಂದರ್ಭದಲ್ಲಿ ಈಗ ಪಟಾಕಿ ಮಾರಾಟಕ್ಕೆ ಸರ್ಕಾರ ನಿಷೇಧ ಹೇರಿರುವುದು ನಮ್ಮ ಹೊಟ್ಟೆ ಮೇಲೆ ಹೊಡೆದಂತಾಗಿದೆ ಎಂದು ಆಸಮಾಧಾನ ವ್ಯಕ್ತಪಡಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPAdeepavali habbagreen patakigreen signalK.Sudhakarkarnatakapataki ban
ShareTweetSendShare
Join us on:

Related Posts

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

ಬಂಗಾಳದಲ್ಲಿ ಯೋಗಿ ಮಾಡೆಲ್ ದರ್ಬಾರ್- ಕಾಮುಕನಿಗೆ ಎನ್‌ಕೌಂಟರ್ ಮೂಲಕ ಯಮಲೋಕದ ದರ್ಶನ: ಮಮತಾ ಬ್ಯಾನರ್ಜಿಗೆ ಮೊಟ್ಟೆ ಏಟು- ಎನ್‌ಕೌಂಟರ್ ವಿರೋಧಿಸಿದ ಟಿಎಂಸಿಗೆ ಸಾರ್ವಜನಿಕರ ಆಕ್ರೋಶದ ಬಿಸಿ

by Shwetha
July 11, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದ 12 ವರ್ಷದ ಬಾಲಕಿಯ ಮೇಲಿನ ಅಮಾನುಷ ಗ್ಯಾಂಗ್‌ರೇಪ್ ಮತ್ತು ಕೊಲೆ ಪ್ರಕರಣದ ಮುಖ್ಯ ಆರೋಪಿ ಪ್ರಭಾಸ್ ಮೊಂಡಲ್ ಈಗ ಇತಿಹಾಸ....

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಉದಯನಿಧಿ ಆರೋಪಕ್ಕೆ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

by Shwetha
July 11, 2026
0

ರಾಮಲಿಂಗಾ ರೆಡ್ಡಿ ಅವರು, ಉದಯನಿಧಿ ಸ್ಟಾಲಿನ್ ಅವರ ಕಾವೇರಿ ನೀರು ಬಿಡುಗಡೆ ಕುರಿತ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದಿಲ್ಲ ಎಂದು ನಾವು...

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

by Shwetha
July 11, 2026
0

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಏಕಕಾಲಕ್ಕೆ ಹಲವು ಗಂಭೀರ ಆರೋಪಗಳನ್ನು ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 11, 2026
0

ದಿನ ಭವಿಷ್ಯ 11-07-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಧ್ಯಮ ಫಲ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲು ಇದು ಸಕಾಲವಲ್ಲ. ಇಂದು ಯಾವುದೇ ದೊಡ್ಡ...

mohammad salah

fifaworldcup-2026: ಫುಟ್‍ಬಾಲ್ ಅಂಗಳದ ಈಜಿಪ್ಟ್ ಚಿರತೆ ಮಹಮ್ಮದ್ ಸಲಾಹ್.. ಆಟದಷ್ಟೇ ಹೃದಯ ಗೆದ್ದ ಮಾಣಿಕ್ಯ..!⚽👑🇪🇬 🐆

by admin
July 10, 2026
0

ಒಂದು ಕ್ಷಣ ಕಣ್ಣುಮುಚ್ಚಿ.. ಆಮೇಲೆ ಓದಿ ನೋಡಿ.. ಆಗ ನಿಮ್ಮಲ್ಲೂ ಮೂಡಬಹುದೊಂದು ಭಾವನೆ.. ಹೀಗೂ ಇದೆಯಾ ಅನ್ನೋ ಯೋಚನೆ..! 🚀🔥⚽ ಇದು ಒಂದು ಸಣ್ಣ ಹಳ್ಳಿಯ ಕೆಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram