ಮಂಗಳೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸಲಿರುವ ರಾಜ್ಯದ ಮೊದಲ ತೇಜಸ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಸೇವೆ ಪ್ರಾರಂಭಿಸಲಿದೆ. ತೇಜಸ್ ಎಕ್ಸ್ಪ್ರೆಸ್ ಭಾರತೀಯ ರೈಲ್ವೆಯ ಖಾಸಗೀಕರಣದಲ್ಲಿ ಸರ್ಕಾರದ ಮೊದಲ ಪ್ರಯತ್ನವಾಗಿದೆ. ಇದು ಎರಡು ನಗರಗಳ ನಡುವಿನ ಅತಿ ವೇಗದ ರೈಲು ಸೇವೆಯಾಗಿದೆ.
ತೇಜಸ್ ಮಂಗಳೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 12: 10 ಕ್ಕೆ ಕೊಯಮತ್ತೂರು ತಲುಪಲಿದೆ. ಕೊಯಮತ್ತೂರಿನಿಂದ ಮಧ್ಯಾಹ್ನ 2: 30 ರಿಂದ ಹೊರಟು ರಾತ್ರಿ 8: 40 ಕ್ಕೆ ಮಂಗಳೂರು ತಲುಪಲಿದೆ. ಸೋಮವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಈ ರೈಲು ಸಂಚರಿಸಲಿದೆ ಎಂದು ವೆಬ್ಸೈಟ್ನಲ್ಲಿ ಉಲ್ಲೇಖಿಸಲಾಗಿದೆ. ರೈಲು ಸೇವೆಯ ಟಿಕೆಟ್ ದರಗಳನ್ನು ಇನ್ನೂ ನಿಗದಿಪಡಿಸಿಲ್ಲ.
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ
ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...








