ಗಾಂಧಿನಗರ: ಕಲುಷಿತ ಆಯುರ್ವೇದಿಕ್ ಸಿರಪ್ ಸೇವಿಸಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಜರಾತ್ ನ ಖೇಡಾ ಜಿಲ್ಲೆಯಲ್ಲಿ ಮಿಥೈಲ್ ಆಲ್ಕೋಹಾಲ್ ಮಿಶ್ರಿತ ಕಲುಷಿತ ಆಯುರ್ವೇದಿಕ್ ಸಿರಪ್ (Ayurvedic Syrup) ಸೇವಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ಕನಿಷ್ಠ ಐದು ಜನ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಲ್ಮೇಘಸವ್ – ಅಸವ ಅರಿಷ್ಟ’ ಎಂಬ ಹೆಸರಲ್ಲಿದ್ದ ಆಯುರ್ವೇದಿಕ್ ಸಿರಪ್ ಅನ್ನು ಬಿಲೋದರ ಗ್ರಾಮದ ಅಂಗಡಿ ಕೌಂಟರ್ನಲ್ಲಿ ಸುಮಾರು 50 ಜನರಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಗ್ರಾಮಸ್ಥರೊಬ್ಬರ ರಕ್ತದ ಮಾದರಿ ವರದಿಯು ಸಿರಪ್ಗೆ ಮಿಥೈಲ್ ಆಲ್ಕೋಹಾಲ್ ಮಾರಾಟ ಮಾಡುವ ಮೊದಲು ಸೇರಿಸಿರುವುದು ದೃಢಪಟ್ಟಿದೆ ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಗಧಿಯಾ ತಿಳಿಸಿದ್ದಾರೆ.