ಚೆನ್ನೈ: ಮಿಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಸದ್ಯ ಮಳೆಯ ರೌದ್ರಾವತಾರಕ್ಕೆ ಐವರು ಬಲಿಯಾಗಿದ್ದಾರೆ.
ಭಾರೀ ಮಳೆಗೆ ತಮಿಳುನಾಡು (Tamilnadu) ಹಾಗೂ ಆಂಧ್ರದಲ್ಲಿ (Andhra Pradesh) ಭರ್ಜರಿ ಮಳೆಯಾಗುತ್ತಿದೆ. ಕಳೆದ 80 ವರ್ಷಗಳಲ್ಲಿಯೇ ಭಾರೀ ಮಳೆಯಾಗುತ್ತಿದೆ. ಚೈನ್ನೈ ನಗರ ಭರ್ಜರಿ ಮಳೆಯಾಗುತ್ತಿದೆ. ವರುಣ ದೇವ ನಿರಂತರವಾಗಿ ಸುರಿಯುತ್ತಿದ್ದಾನೆ. ಹೀಗಾಗಿ ಚೆನ್ನೈ ನಗರದಲ್ಲಿ ಐವರು ಬಲಿಯಾಗಿದ್ದಾರೆ. 20ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.
ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಬಸ್ ಗಳು ರಸ್ತೆಗೆ ಇಳಿದಿಲ್ಲ. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವಾರು ಕಚೇರಿಗಳಿಗೂ ರಜೆ ಘೋಷಿಸಲಾಗಿದೆ. ಹೀಗಾಗಿ ಬಹುತೇಕ ಜನರು ಮನೆಯಲ್ಲಿಯೇ ಉಳಿದಿದ್ದಾರೆ.