ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ : ರಾಯಚೂರಿನಲ್ಲಿ ಪ್ರವಾಹ Raichur
ರಾಯಚೂರು : ಒಳ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಜಲಾಶಯದಿಂದ 4,06,000 ಕ್ಯೂಸೆಕ್ಸ್ ನೀರು ಬಿಡುಗಡೆಗೊಳಿಸಿರುವ ಪರಿಣಾಮ ಜಿಲ್ಲೆಯ ದೇವದುರ್ಗದ ಕೊಪ್ಪರ ಹಳ್ಳದ ಸೇತುವೆ ಮುಳುಗಡೆಯಾಗಿದೆ.
ಇದರಿಂದ ಕೊಪ್ಪರ- ಗೂಗಲ್ ರಸ್ತೆ ಸಂಪೂರ್ಣ ಬಂದ್ ಆಗಿದೆ.
ಜಲಾಶಯದಿಂದ ನೀರು ಬಿಡುಗಡೆಗೊಳಿಸಿದ ಪರಿಣಾಮವಾಗಿ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ನದಿ ಪಾತ್ರದಲ್ಲಿರುವ ಹಳ್ಳಕೊಳ್ಳಗಳು ಸಂಪೂರ್ಣವಾಗಿ ಭರ್ತಿಯಾಗಿ ಹರಿಯುತ್ತಿವೆ.
ಇದರಿಂದ ಅನೇಕ ಸೇತುವೆಗಳು ಜಲಾವೃತ್ತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.