‘ಮಹಾ’ ಮಳೆಗೆ ತತ್ತರಿಸಿಹೋದ ಮಹಾರಾಷ್ಟ್ರ – ಈವರೆಗೂ 100 ಮಂದಿ ಬಲಿ
ಮುಂಬೈ: ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ..
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ.. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.. ರಣ ಮಳೆಗೆ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ ಮತ್ತು ಹಲವಾರು ಜಿಲ್ಲೆಗಳಲ್ಲಿ ಭೂ ಕುಸಿತ ಮತ್ತು ಪ್ರವಾಹ ಸಂಭವಿಸಿದೆ.
ಸಶಸ್ತ್ರ ಪಡೆಗಳು ಮತ್ತು ಎನ್ಆರ್ಎಫ್ ತಂಡ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ತಕ್ಷಣಕ್ಕೆ ಮಳೆ ನಿಲ್ಲುವಂತೆ ಕಾಣಿಸುತ್ತಿಲ್ಲ. ಅಲ್ಲದೇ ಮಹಾರಾಷ್ಟ್ರದ ಕರಾವಳಿ ಕೊಂಕಣ, ಪುಣೆಯ ರಾಯಗಡ, ರತ್ನಾಗಿರಿ, ಸಿಂಧುದುರ್ಗ್, ಪಶ್ಚಿಮ ಮಹಾರಾಷ್ಟ್ರದ ಸತಾರಾ ಮತ್ತು ಕೊಲ್ಹಾಪುರದಲ್ಲಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಈ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗ್ಗೆ ಸುರಿದ ಭಾರೀ ಮಳೆಯಿಂದಾಗಿ ದಕ್ಷಿಣ ಗೋವಾದ ದೂಧ್ ಸಾಗರ್ ಮತ್ತು ಸೋನೌಲಿಮ್ ನಡುವಿನ ಪ್ಯಾಸೆಂಜರ್ ರೈಲು ಮತ್ತು ವಶಿಷ್ಠಿ ನದಿ ಉಕ್ಕಿ ಹರಿದ ಪರಿಣಾಮ ಮಹಾರಾಷ್ಟ್ರದ ಚಿಪ್ಲುನ್ ಮತ್ತು ಕಾಮಥೆ ನಡುವಿನ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ.
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವೆಡೆ ಭೂಕುಸಿತ ಮತ್ತು ಪ್ರವಾಹ ಉಂಟಾಗಿದ್ದು, ಸುಮಾರು 136 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿಯೂ ರಾಯಗಡ ಹಾಗೂ ಸತಾರಾ ಜಿಲ್ಲೆಯಲ್ಲಿ ಹೆಚ್ಚಿನ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ..








