ಬೆಂಗಳೂರು : ನೆರೆ ಹಾನಿ ಸಂಬಂಧ ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗಿಂತಲೂ ಈ ಸಲ ನೆರೆ ಹಾನಿ ಹೆಚ್ಚಾಗಿದೆ. ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ.
ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಭಾರೀ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ 1ರಿಂದ 12ನೇ ತರಗತಿಯ ಶೇ.30ರಷ್ಟು ಪಠ್ಯ ಕಡಿತ
ಮನೆ ಕಳೆದುಕೊಂಡವರಿಗೆ ತಕ್ಷಣ ಈಗಾಗಲೇ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ವಿತರಣೆ ಮಾಡಿದ್ದೇವೆ ಎಂದರು.
ನೆರೆ ಹಾನಿ ಪರಿಹಾರ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಎನ್ ಡಿಆರ್ ಎಫ್ ನಿಯಮಾವಳಿ ತಿದ್ದುಪಡಿ ಬಗ್ಗೆಯೂ ಚರ್ಚಿಸುತ್ತೇವೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಇದನ್ನೂ ಓದಿ : ಪ್ರವಾಹ ಸಂತ್ರಸ್ಥರ ಮಧ್ಯೆ ಪೊಲೀಸಪ್ಪನ ಬಿಲ್ಡಪ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel