ಒಟ್ಟಾವಾ: ಕೆನಡಾ ಹಾಗೂ ಭಾರತೀಯ ಸಂಬಂಧ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಇನ್ನೊಂದೆಡೆ ಖಲಿಸ್ಥಾನಿಗಳು ಹಿಂದೂಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಆದರೆ, ಭಾರತೀಯರು ಇದ್ಯಾವುದಕ್ಕೂ ಜಗ್ಗುವವರಲ್ಲ ಎಂಬುವುದು ಆಗಾಗ ಸಾಬೀತಾಗುತ್ತಲೇ ಇದೆ. ಈಗ ಅಂತಹುದೇ ಹೆಮ್ಮೆಯ ಸಂಗತಿ ಒಂದು ನಡೆದಿದೆ.
ಕೆನಡಾದಲ್ಲಿ ಅದರಲ್ಲಿಯೂ ಅಲ್ಲಿನ ಸಂಸತ್ನಲ್ಲಿಯೇ (Parliament) ಕನ್ನಡಿಗರೊಬ್ಬರು ದೀಪಾವಳಿ ಆಚರಿಸಿದ್ದಾರೆ. ಸಂಸದ ಚಂದ್ರ ಆರ್ಯ (MP Chandra Arya) ಪಾರ್ಲಿಮೆಂಟ್ ಹಿಲ್ನಲ್ಲಿ ದೀಪಾವಳಿ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಓಂ ಎಂದು ಬರೆದಿರುವ ಹಿಂದೂ ಧ್ವಜ ಹಾರಿಸಿದ್ದಾರೆ. ಈ ಕ್ಷಣಕ್ಕೆ ನೂರಾರು ಹಿಂದೂಗಳು ಸಾಕ್ಷಿಯಾಗಿದ್ದರು.
ಹಿಲ್ನಲ್ಲಿ ದೀಪಾವಳಿ ಆಯೋಜಿಸಿದ್ದಕ್ಕೆ ನನಗೆ ಸಂತಸವಾಗಿದೆ. ‘ಓಂ’ ಚಿಹ್ನೆ ಒಳಗೊಂಡ ಹಿಂದೂ ಧ್ವಜವನ್ನು (Hindu Flag) ಹಾರಿಸಿದೆವು. ಈ ಆಚರಣೆಗೆ ಕೆನಡಾದಲ್ಲಿರುವ 67 ಹಿಂದೂ ಮತ್ತು ಇಂಡೋ-ಕೆನಡಾ ಸಂಘಟನೆಗಳು ಬೆಂಬಲ ನಿಡಿದ್ದವು ಎಂದು ಹೇಳಿದ್ದಾರೆ.