ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

Namratha Rao by Namratha Rao
September 19, 2021
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

5 ರುಚಿಕರ ಅಡುಗೆಗಳ ರೆಸಿಪಿಗಳು ನಿಮಗಾಗಿ..!

1. ಹೆಸರು ಬೇಳೆ – ನವಣೆ ಅಕ್ಕಿ ದೋಸೆ

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಬೇಕಾಗುವ ಪದಾರ್ಥಗಳು

ಹೆಸರು ಬೇಳೆ – 3/4 ಕಪ್
ನವಣೆ ಅಕ್ಕಿ – 3/4 ಕಪ್
ಶುಂಠಿ – 1 ಇಂಚು
ಹಸಿರು ಮೆಣಸು – 2
ಜೀರಿಗೆ – 1 ಚಮಚ
ರುಚಿಗೆ ತಕ್ಕಂತೆ ಉಪ್ಪು
ಕೊತ್ತಂಬರಿ ಸೊಪ್ಪು – ಸ್ವಲ್ಪ
ಎಣ್ಣೆ/ತುಪ್ಪSaakshatv cooking recipes moong dosa

ಮಾಡುವ ವಿಧಾನ

ಮೊದಲಿಗೆ ಹೆಸರು ಬೇಳೆಯನ್ನು ಮೊಳಕೆ ಬರಿಸಿಕೊಳ್ಳಿ.
ನವಣೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಅದನ್ನು ಕನಿಷ್ಠ 2-3 ಗಂಟೆಗಳ ಕಾಲ ನೆನೆಸಿಡಿ. ನಂತರ ನೆನೆದ ನವಣೆ ಅಕ್ಕಿಯನ್ನು ನೀರಿನಿಂದ ಸೋಸಿ. ಮಿಕ್ಸರ್ ಗೆ ನವಣೆ ಅಕ್ಕಿ, ಹೆಸರು ಕಾಳು, ಶುಂಠಿ, ಮೆಣಸಿನಕಾಯಿ, ಜೀರಿಗೆ, ಉಪ್ಪು ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ರುಬ್ಬಿ. ನಂತರ 1/2 ಕಪ್ ನೀರು ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ.

ದೋಸೆ ಕಾವಲಿಯನ್ನು ಬಿಸಿ ಮಾಡಿ. ಕಾದಾಗ ಸ್ವಲ್ಪ ಎಣ್ಣೆ/ತುಪ್ಪ ಸವರಿ. ನಂತರ ರುಬ್ಬಿಕೊಂಡ ಹಿಟ್ಟನ್ನು ಕಾವಲಿ ಮೇಲೆ ವೃತ್ತಾಕಾರದಲ್ಲಿ ಹರಡಿ. ಎಣ್ಣೆಯನ್ನು ಚಿಮುಕಿಸಿ, ಎರಡು ಬದಿಗಳನ್ನು ಚೆನ್ನಾಗಿ ಬೇಯಿಸಿ.

2. ಸಿಹಿಯಾದ ಬ್ರೆಡ್ ಗುಲಾಬ್ ಜಾಮೂನ್

ಬೇಕಾಗುವ ಪದಾರ್ಥಗಳು

ಸಕ್ಕರೆ – 1 ಕಪ್
ನೀರು – 1/2 ಕಪ್
ಏಲಕ್ಕಿ ಪುಡಿ – 1 1/2 ಟೀಸ್ಪೂನ್
ಡ್ರೈ ಫ್ರೂಟ್ಸ್ – ಸ್ವಲ್ಪ
ಗುಲ್ಕಂಡ್ / ರೋಸ್ ಪೆಟಲ್ ಜಾಮ್ – 1 ಚಮಚ
ಬ್ರೆಡ್ ಚೂರುಗಳು – 6
ಅಡಿಗೆ ಸೋಡಾ ಚಿಟಿಕೆಯಷ್ಟು
ಅಗತ್ಯವಿರುವಷ್ಟು ಹಾಲು

ಮಾಡುವ ವಿಧಾನ
ಪ್ಯಾನ್ ಅನ್ನು ಹೆಚ್ಚಿನ ಶಾಖದಲ್ಲಿ ಬಿಸಿ ಮಾಡಿ.ಸಕ್ಕರೆ ಮತ್ತು ನೀರು ಸೇರಿಸಿ. ಚೆನ್ನಾಗಿ ಬೆರೆಸಿ.
ಸಕ್ಕರೆ ಕರಗಿದಾಗ ಮತ್ತು ಸಿರಪ್ ಕುದಿ ಬರಲು ಪ್ರಾರಂಭವಾದಾಗ ಸಣ್ಣ ಉರಿಯಲ್ಲಿ 7-8 ನಿಮಿಷಗಳ ಕಾಲ ಕುದಿಯಲು ಬಿಡಿ. ನಂತರ ಕೆಳಗಿಳಿಸಿ.
ಏಲಕ್ಕಿ ಪುಡಿ ಸೇರಿಸಿ. ಚೆನ್ನಾಗಿ ಬೆರೆಸಿ. ಸಕ್ಕರೆ ಪಾಕ ರೆಡಿಯಾಗಿದೆ.‌
Saakshatv cooking recipes Gulabjamun
ಒಂದು ಪಾತ್ರೆಯಲ್ಲಿ ಗುಲ್ಕಂಡ್ (ಗುಲಾಬಿ ದಳಗಳ ಜಾಮ್) ತೆಗೆದುಕೊಳ್ಳಿ. ಅದಕ್ಕೆ ಡ್ರೈ ಫ್ರೂಟ್ಸ್ ( ಗೋಡಂಬಿ ಬೀಜಗಳು, ಬಾದಾಮಿ, ಪಿಸ್ತಾ) ಸೇರಿಸಿ.
ಚೆನ್ನಾಗಿ ಮಿಶ್ರ ಮಾಡಿ. ಇದನ್ನು ಸ್ವಲ್ಪ ಸಮಯದವರೆಗೆ ರೆಫ್ರಿಜರೇಟರ್ನಲ್ಲಿ ಇರಿಸಿ.

ಬ್ರೆಡ್ ತುಂಡುಗಳನ್ನು ತೆಗೆದುಕೊಳ್ಳಿ. ಬ್ರೆಡ್ ನ ಅಂಚುಗಳನ್ನು ಕತ್ತರಿಸಿ. ಈಗ ಬ್ರೆಡ್‌ ಅನ್ನು ಸಣ್ಣ ತುಂಡುಗಳನ್ನು ಮಾಡಿ ಪುಡಿ ಮಾಡಿ. ಅದಕ್ಕೆ ಅಡಿಗೆ ಸೋಡಾ ಸೇರಿಸಿ. ಹಾಲನ್ನು ಸೇರಿಸಿ ಮಿಶ್ರಣ ಮಾಡಿ.
ಬ್ರೆಡ್‌ ಗೆ ಅನುಗುಣವಾಗಿ ಹಾಲಿನ ಪ್ರಮಾಣವನ್ನು ಹೊಂದಿಸಿ. ಅರೆ ಮೃದುವಾದ ಹಿಟ್ಟನ್ನು ತಯಾರಿಸಿ. ಅಗತ್ಯವಿದ್ದರೆ ಹೆಚ್ಚು ಹಾಲು ಸೇರಿಸಿ.
ರೆಫ್ರಿಜರೇಟರ್ನಲ್ಲಿ ಇರಿಸಿದ ಮಿಶ್ರಣದ ಜೊತೆ ಬೆರೆಸಿಕೊಳ್ಳಿ.
ಈ ಮಿಶ್ರಣದಿಂದ ಸಣ್ಣ ಸಣ್ಣ ಉಂಡೆಗಳನ್ನು ತಯಾರಿಸಿ. ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ಮಾಡಿಟ್ಟುಕೊಂಡ ಸಣ್ಣ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ.‌ ಕಡಿಮೆ ಶಾಖದಲ್ಲಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ಈಗ ಸಿಹಿಯಾದ ಗುಲಾಬ್ ಜಾಮೂನ್‌ಗಳು ಸವಿಯಲು ಸಿದ್ಧವಾಗಿದೆ.

5 ಸುಲಭ, ಆರೋಗ್ಯಕರ ಮತ್ತು ರುಚಿಕರ ತರಕಾರಿ ಚೆಟ್ನಿ, ಪಲ್ಯಗಳ ರೆಸಿಪಿಗಳು..!

3. ಶೇಂಗಾ/ನೆಲಕಡಲೆ ಲಡ್ಡು

ಬೇಕಾಗುವ ಸಾಮಗ್ರಿಗಳು
ಶೇಂಗಾ/ನೆಲಕಡಲೆ – 2 ಕಪ್
ಬೆಲ್ಲ – 2 ಕಪ್
ತುಪ್ಪ – 2 ಚಮಚ
Saakshatv cooking recipe how to prepare peanut laddu
ಮಾಡುವ ವಿಧಾನ:
ಮೊದಲಿಗೆ ಶೇಂಗಾ/ನೆಲಕಡಲೆಯನ್ನು ಸಣ್ಣ ಉರಿಯಲ್ಲಿ ಹುರಿದು, ನಂತರ ಅದರ ಸಿಪ್ಪೆಗಳನ್ನು ತೆಗೆಯಿರಿ. ಬಳಿಕ ಹುಡಿ ಮಾಡಿಕೊಳ್ಳಿ.
ನಂತರ ಬಾಣಲೆ ಬಿಸಿ ಮಾಡಿ ಬೆಲ್ಲ ಸೇರಿಸಿ, ಸ್ವಲ್ಪ ನೀರಿನ ಜೊತೆ ಕುದಿಸಿ. ಪಾಕ ಬಂದ ಬಳಿಕ ಅದಕ್ಕೆ ತುಪ್ಪವನ್ನು ಸೇರಿಸಿ. ನಂತರ ‌ಅದಕ್ಕೆ ಹುಡಿ ಮಾಡಿಕೊಂಡ ಶೇಂಗಾ/ನೆಲಕಡಲೆ ಹುಡಿಯನ್ನು ಸೇರಿಸಿ. ಚೆನ್ನಾಗಿ ಬೆರೆಸಿ. ಒಲೆಯಿಂದ ಕೆಳಗಿಳಿಸಿ, ಪಾಕ ಆರಿದ ನಂತರ ಉಂಡೆ ಕಟ್ಟಿ. ರುಚಿಯಾದ ಶೇಂಗಾ/ನೆಲಕಡಲೆ ಲಡ್ಡು ಸವಿಯಲು ಸಿದ್ಧವಾಗಿದೆ.

ಸಂಜೆ ಸ್ನಾಕ್ಸ್ ಗೆ 5 ಆರೋಗ್ಯಕರ ಹಾಗೂ ರುಚಿಕರ ತಿನಿಸುಗಳ ರೆಸಿಪಿಗಳು..!

4. ನಿಪ್ಪಟ್ಟು

ಬೇಕಾಗುವ ಸಾಮಗ್ರಿಗಳು

ಕಡ್ಲೆ ಬೇಳೆ – 2 ಚಮಚ
ಅಕ್ಕಿಹಿಟ್ಟು – 1/2 ಕೆಜಿ
ಮೆಣಸಿನ ಹುಡಿ – 1 ಚಮಚ
ಹುರಿಗಡಲೆ ಹುಡಿ – 1 ಚಮಚ
ತುಪ್ಪ – 2 ಚಮಚ
ತೆಂಗಿನಕಾಯಿ ತುರಿ – 1/2 ಕಪ್
ಬಿಳಿ ಎಳ್ಳು – ಸ್ವಲ್ಪ
ಇಂಗು – ಚಿಟಿಕೆಯಷ್ಟು
ಸಣ್ಣಗೆ ಹೆಚ್ಚಿದ ಕರಿಬೇವಿನ ಸೊಪ್ಪು – ಸ್ವಲ್ಪ
ರುಚಿಗೆ ತಕ್ಕಷ್ಟು ಉಪ್ಪು
Saakshatv cooking recipe nippattu
ಮಾಡುವ ವಿಧಾನ

ಮೊದಲಿಗೆ ಕಡ್ಲೆ ಬೇಳೆಯನ್ನು ನೀರಿನಲ್ಲಿ ಒಂದು ಗಂಟೆ ನೆನೆಸಿಡಿ. ನಂತರ ಅಕ್ಕಿಹಿಟ್ಟನ್ನು ಪಾನ್ ನಲ್ಲಿ ಸ್ವಲ್ಪ ಹುರಿದು ಬೆಚ್ಚಗೆ ಮಾಡಿ. ಈಗ ಒಂದು ಪಾತ್ರೆಗೆ ಹುರಿದ ಅಕ್ಕಿಹಿಟ್ಟು, ನೆನೆಸಿದ ಕಡ್ಲೆಬೇಳೆ, ಮೆಣಸಿನ ಪುಡಿ, ಹುರಿಗಡಲೆ ಹುಡಿ, ತುಪ್ಪ, ಬಿಳಿ ಎಳ್ಳು, ತೆಂಗಿನ ತುರಿ, ಉಪ್ಪು, ಇಂಗು, ಹೆಚ್ಚಿದ ಕರಿಬೇವು ಸೇರಿಸಿ ಸ್ವಲ್ಪ ಸ್ವಲ್ಪವೇ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ಹಿಟ್ಟಿನಿಂದ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ ಅದನ್ನು ತಟ್ಟಿ ಎಣ್ಣೆಯಲ್ಲಿ ‌ಕರಿದು ತೆಗೆಯಿರಿ. ಈಗ ರುಚಿಯಾದ ಗರಿಗರಿಯಾದ ನಿಪ್ಪಟ್ಟು ಸವಿಯಲು ‌ಸಿದ್ಧ.

5 ಸುಲಭ , ರುಚಿಕರ , ಆರೋಗ್ಯಕರ ಸಾರು , ಗೊಜ್ಜು , ಗ್ರೇವಿ ರೆಸಿಪಿಗಳು..!

5. ತರಕಾರಿ ಕಟ್ಲೇಟ್

ಬೇಕಾಗುವ ಸಾಮಗ್ರಿಗಳು

ಕತ್ತರಿಸಿದ ಕ್ಯಾರೆಟ್ – 1/2 ಕಪ್
ಕತ್ತರಿಸಿದ ಬೀನ್ಸ್ – 1/2 ಕಪ್
ಬಟಾಣಿ – 1/4 ಕಪ್
ಕತ್ತರಿಸಿದ ಆಲೂಗಡ್ಡೆ – 1 ಕಪ್
ಬ್ರೆಡ್ ಕ್ರಂಬ್ – 1 ಕಪ್
ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪು- ಸ್ವಲ್ಪ
ಹಸಿಮೆಣಸು -2
ಈರುಳ್ಳಿ – 1/4 ಕಪ್
ಕೊತ್ತಂಬರಿ ಹುಡಿ – 1/2 ಚಮಚ
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಮೈದಾ – 3 ಚಮಚ
ಗರಂ ಮಸಾಲೆ – 1/2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಮೆಣಸಿನ ಪುಡಿ – 1/2 ಚಮಚ
ಸಾಸಿವೆ – 1 ಚಮಚ
ಎಣ್ಣೆ – 2 ಚಮಚ
ನೀರು – ಸ್ವಲ್ಪ

Saakshatv cooking recipe prepare vegetables cutlets
ಮಾಡುವ ವಿಧಾನ

ಮೊದಲಿಗೆ ಕ್ಯಾರೆಟ್, ಬೀನ್ಸ್, ಬಟಾಣಿ, ಆಲೂಗಡ್ಡೆಗಳನ್ನು ಬೇಯಿಸಿಟ್ಟುಕೊಳ್ಳಿ. ನಂತರ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ. ಎಣ್ಣೆ ಬಿಸಿಯಾದ ನಂತರ ಸಾಸಿವೆ ಹಾಕಿ. ಅದು ಸಿಡಿದ ಬಳಿಕ ಅದಕ್ಕೆ ಕತ್ತರಿಸಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಕತ್ತರಿಸಿದ ಹಸಿಮೆಣಸು ಸೇರಿಸಿ ಈರುಳ್ಳಿ ಕೆಂಪು ಬಣ್ಣಕ್ಕೆ ತಿರುಗುವವರೆಗೆ ತಿರುವಿಕೊಳ್ಳಿ. ನಂತರ ಇದಕ್ಕೆ ಬ್ರೆಡ್ ಕ್ರಂಬ್ಸ್ ಹಾಗೂ ಕೊತ್ತಂಬರಿ ಸೊಪ್ಪು ಸೇರಿಸಿ ಮಿಶ್ರ ಮಾಡಿ.
ನಂತರ ಇದಕ್ಕೆ ಬೇಯಿಸಿಟ್ಟುಕೊಂಡ ತರಕಾರಿ, ಮೆಣಸಿನ ಪುಡಿ, ಕೊತ್ತಂಬರಿಪುಡಿ, ಗರಂ ಮಸಾಲಾ ಹಾಕಿ ಚೆನ್ನಾಗಿ ಮಿಶ್ರ ಮಾಡಿ. ಇದು ಹಿಟ್ಟಿನ ಹದಕ್ಕೆ ಬರುವವರೆಗೆ ಬೇಯಿಸಿಕೊಂಡು ಕಟ್ಲೆಟ್ ಮಾಡಿಕೊಳ್ಳಿ. ಬಳಿಕ ಮೈದಾ ಹಿಟ್ಟಿಗೆ ಸ್ವಲ್ಪ ನೀರನ್ನು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಹಿಟ್ಟನ್ನು ಮಾಡಿಕೊಳ್ಳಿ. ಈಗ ತವಾ ಬಿಸಿ ಮಾಡಿ. ನಂತರ ಕಟ್ಲೆಟ್ ಅನ್ನು ಮೈದಾ ಹಿಟ್ಟಿನಲ್ಲಿ ಮುಳುಗಿಸಿ ಬ್ರೆಡ್ ಕ್ರಂಬ್ಸ್ ಇರುವ ತಟ್ಟೆಯಲ್ಲಿ ಅದ್ದಿ ತವಾದಲ್ಲಿ ಕಾಯಿಸಿ. ಎರಡೂ ಬದಿಗೆ ಎಣ್ಣೆ ಹಾಕಿ ಚೆನ್ನಾಗಿ ಕಾಯಿಸಿ ತೆಗೆಯಿರಿ.

Tags: #saakshatvcookingFood
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram