ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Samagra karnataka

ಬರದ ನಾಡಲ್ಲಿ ವಿದೇಶಿ ಬಾನಾಡಿಗಳ ಕಲರವ ಅಂದವೇ ಅಂದ..!

Kariyappa N by Kariyappa N
December 16, 2020
in Samagra karnataka, ಎಸ್ ಸ್ಪೆಷಲ್, ರಾಜ್ಯ
forign birds
Share on FacebookShare on TwitterShare on WhatsappShare on Telegram

                                             ಮಾಗಡಿ ಕೆರೆಯಲ್ಲಿ ವಿದೇಶಿ ಬಾನಾಡಿಗಳ ಕಲರವ

ಗದಗ: ಆ ಗ್ರಾಮದ ಕೆರೆ ಬರೀ ನೀರು ತುಂಬಿಕೊಂಡಿಲ್ಲ. ಬದಲಾಗಿ ಆಕಾಶದತ್ತರಕ್ಕೆ ಹಾರೋ ಬಾನಾಡಿಗಳ ಲೋಕವನ್ನೇ ತನ್ನ ಮಡಿಲಿಗೆ ಹಾಕಿಕೊಂಡಿದೆ. ಸಹಸ್ರಾರು ವಲಸೆ ಪಕ್ಷಿಗಳಿಗೆ ತೂಗೋ ತೊಟ್ಟಿಲಾಗೋ ಮೂಲಕ ಆಶ್ರಯ ತಾಣವಾಗಿದೆ. ಅಂತಹ ಸೌಂದರ್ಯದ ತಾಣವನ್ನು ನೋಡೋದಕ್ಕೆ ಎರಡು ಕಣ್ಣು ಸಾಲದು. ಸ್ವಚ್ಛಂದವಾಗಿ ಹಾರಾಡ್ತಿರೋ ಹಕ್ಕಿಗಳು…! ತಂಪಾದ ಕೆರೆಯಲ್ಲಿ ಈಜುತ್ತಿರೋ ಬಾನಾಡಿಗಳು…! ಕಣ್ಣು ಹಾಯಿಸಿದಲ್ಲೆಲ್ಲಾ ಶ್ವೇತ ವರ್ಣದ ವಿವಿಧ ಪ್ರಭೇದದ ಪಕ್ಷಿಗಳು..!

Related posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

forign birds
ಹೌದು ಈ ಬಾನಾಡಿಗಳ ಮನಮೋಹಕ ದೃಶ್ಯಗಳು ಕಂಡು ಬರುವುದು ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಯಲ್ಲಿ. ನೇಸರನ ಆಗಮನದ ಬೆನ್ನಲ್ಲೇ ವಿಶಾಲ ಕೆರೆಯ ಸುತ್ತ ಮುತ್ತ ವಿದೇಶಿ ಹಕ್ಕಿಗಳ ಕಲರವ ಸಂಭ್ರಮ ಹೇಳತೀರದು.
ಬೆಳಿಗ್ಗೆಯಿಂದ ಸಂಜೆಯವರೆಗೂ ಈ ವಲಸೆ ಪಕ್ಷಿಗಳ ಸಾಮ್ರಾಜ್ಯ ಎಂಥವರನ್ನೂ ಬೆರಗು ಮೂಡಿಸುತ್ತಾ ಇದೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ವಿಶಾಲವಾದ ಕೆರೆಯಿದೆ. ಗದಗದಿಂದ ಬೆಂಗಳೂರಿಗೆ ಹೋಗುವ ರಾಜ್ಯ ಹೆದ್ದಾರಿಯಲ್ಲಿ ಲಕ್ಷ್ಮೇಶ್ವರದಿಂದ 12 ಕಿಲೋ ಮೀಟರ್ ಅಂತರದಲ್ಲಿ 138 ಎಕರೆ ವಿಸ್ತಾರದ ಈ ಕೆರೆಯಲ್ಲಿ ಹಲವು ವರ್ಷಗಳಿಂದ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಸೈಬೇರಿಯಾ, ಮಲೇಷಿಯಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಟಿಬೆಟ್, ನಮ್ಮ ದೇಶದ ಲಢಾಕ್‍ಗಳಿಂದ ಸಹಸ್ರಾರು ಪಕ್ಷಿಗಳು ಬರುತ್ತಿವೆ.

forign birds
ಈ ಬಾನಾಡಿಗಳ ಕಲರವ ಪ್ರತಿವರ್ಷ ಕೆರೆಗೆ ರಂಗು ತರುತ್ತಿದೆ. ಜೊತೆಗೆ ಈ ಪಕ್ಷಿಗಳು ನೋಡುಗರನ್ನು ಕೈಬೀಸಿ ಕರೆಯುತ್ತಿದೆ. ಬಾತು ಕೋಳಿಗಿಂತ ದೊಡ್ಡ ಗಾತ್ರದಲ್ಲಿರೋ ಹಂಸಗಳ ಜಾತಿಗೆ ಸೇರಿದ ಪೇಂಟೆಡ್ ಸ್ಟಾರ್ಕ್, ಬಾರ್ ಹೆಡೆಡ್ ಗೂಜ್, ಬ್ರಾಹ್ಮಿಣಿ ಡಕ್, ವೈಟ್ ಬಿಸ್, ಬ್ಲಾಕ್ ಬಿಸ್, ಬ್ಲಾಕ್ ನೆಕ್ಕಡ್, ಲಿಟಲ್ ಕಾರ್ಮೊರಂಟ್ ಹೀಗೆ ಸುಮಾರು 16ಕ್ಕೂ ಹೆಚ್ಚು ಜಾತಿಯ ಪಕ್ಷಿಗಳು ಈ ಕೆರೆಗೆ ಬರುತ್ತವೆ. ಸದ್ಯ 3000 ಕ್ಕೂ ಅಧಿಕ ಪಕ್ಷಿಗಳು ಇಲ್ಲಿದ್ದು ಮೂರು ತಿಂಗಳಲ್ಲಿ ಇನ್ನು ಹೆಚ್ಚಿನ ಪಕ್ಷಿಗಳು ಕಾಣ ಸಿಗುತ್ತವೆ. ಇವುಗಳ ಈಜು, ಕಲರವ ಒಂದಕ್ಕಿಂತ ಒಂದು ಭಿನ್ನವಾದ ಪಕ್ಷಿಗಳ ನೋಟ ಎಲ್ಲರನ್ನು ಕೆರೆಯತ್ತ ಸೆಳೆಯುತ್ತಿದೆ. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಪಕ್ಷಿ ಪ್ರಿಯರು, ಶಾಲಾ ಮಕ್ಕಳು ಪ್ರವಾಸಕ್ಕಾಗಿ ಆಗಮಿಸಿ ಈ ಪಕ್ಷಿಗಳನ್ನು ಕಲವರವನ್ನು ಕಣ್ಣು ತುಂಬಿಕೊಳ್ಳುತ್ತಿದ್ದಾರೆ. ಈ ಪಕ್ಷಿಗಳು ಇಲ್ಲಿಗೆ ಬರೋದು ಗದಗ ಜಿಲ್ಲೆಯವರಿಗೆ ಹೆಮ್ಮೆಯ ವಿಷಯ ಜೊತೆಗೆ ವಿದೇಶಿ ಪಕ್ಷಿಗಳು ಸ್ವದೇಶದಲ್ಲಿ ನೋಡಲು ಸಿಗುತ್ತಿರುವ ಬಗ್ಗೆ ಸಂತಸ ಕೂಡಾ ಇದೆ.

ಶಾಲಾ ಮಕ್ಕಳ ಹಾಟ್ ಫೇವರಿಟ್ ಮಾಗಡಿ ಕೆರೆ

ಬೆಳಿಗ್ಗೆ ಸೂರ್ಯ ಉದಯಿಸುವ ವೇಳೆಗೆ ಈ ಪಕ್ಷಿಗಳು ಆಹಾರ ಅರಸಿಕೊಂಡ ಕೆರೆಯಿಂದ ಹಾರಿ ಹೋಗುತ್ತವೆ. ನೂರಾರು ಕಿ.ಮೀ ದೂರ ಹೋಗುವ ಪಕ್ಷಿಗಳು ರೈತರ ಹೊಲದಲ್ಲಿ ಬೆಳೆದ ಬೆಳೆಗಳನ್ನು ತಿಂದು ಮೂರು ಘಂಟೆಯಲ್ಲಿ ಮತ್ತೆ ಕೆರೆಗೆ ಬಂದು ಠಿಕಾಣಿ ಹೂಡುತ್ತವೆ. ಮತ್ತೆ ಸಂಜೆ ಸೂರ್ಯ ಮರೆಯಾಗುವ ಮುನ್ನ ಮತ್ತೊಮ್ಮೆ ಅಹಾರ ಅರಸಿ ಹೋಗಿ ಕಾಳು ಕಡಿ ತಿಂದು ಬರುತ್ತವೆ. ಹೀಗೇ ಅಹಾರ ಅರಸಿಕೊಂಡು ಗುಂಪು ಗುಂಪಾಗಿ ಹಾರಿ ಹೋಗುವ ಹಕ್ಕಿಗಳನ್ನು ನೋಡೋದೇ ಕಣ್ಣಿಗೆ ಹಬ್ಬ. ಹಕ್ಕಿಗಳು ಆಗಸದಲ್ಲಿ ಹಾರೋವಾಗ ಬಾನಿನಲ್ಲಿ ರಂಗವಲ್ಲಿ ಬಿಡಿಸಿದ ರೀತಿ ಕಾಣುತ್ತದೆ. ನಮ್ಮೂರಿನ ಕೆರೆಯಲ್ಲಿ ಹಕ್ಕಿಗಳ ಕಲರವ ನೋಡೋದೇ ಚಂದ

forign birds
ನವೆಂಬರ್ ತಿಂಗಳ ಕೊನೆಯ ವಾರದಿಂದ ಮಾಗಡಿ ಕೆರೆಗೆ ಆಗಮಿಸುವ ಈ ಪಕ್ಷಿಗಳು ಮಾರ್ಚ್ ಅಂತ್ಯಕ್ಕೆ ತಮ್ಮ ದೇಶದತ್ತ ಕಾಲು ಕೀಳುತ್ತವೆ. ಹೀಗಾಗಿ ವಿದೇಶಿ ಪಕ್ಷಿಗಳಿಗೆ ಅಚ್ಚುಮೆಚ್ಚಿನ ತಾಣವಾಗಿದೆ ಈ ಕೆರೆ. ಆದ್ರೆ ಇದನ್ನೊಂದು ಪ್ರಸಿದ್ದ ಪಕ್ಷಿಧಾಮವನ್ನಾಗಿ ಅಭಿವೃದ್ದಿಗೊಳಿಸುವಲ್ಲಿ ಮಾತ್ರ ಸರ್ಕಾರ ಮುಂದಾಗದಿರೋದು ವಿಷಾದದ ಸಂಗತಿಯಾಗಿದೆ.
ವರದಿ, ಫೋಟೋ ಕೃಪೆ: ಮಲ್ಲೇಶ್,

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: foriegn birdsgagad districthot favouritemagadi lakeschool childrens
ShareTweetSendShare
Join us on:

Related Posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

35 ಎಕರೆ ಜಾಗದ ರಂಪಾಟ- ಎಚ್‌ಡಿಕೆ ನಟ ಸಾರ್ವಭೌಮ, ಅಶೋಕ್ ಶಕುನಿ: ಬಿಡದಿ ಜಾಗದ ಹೆಸರಲ್ಲಿ ನಾಟಕ ಆಡ್ತಿದ್ದಾರೆಂದು ಪ್ರದೀಪ್ ಈಶ್ವರ್ ಕಿಡಿ!

by Shwetha
August 14, 2026
0

ಬೆಂಗಳೂರು: ಬಿಡದಿಯ 35 ಎಕರೆ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರ ವಿರುದ್ಧ ಕಾಂಗ್ರೆಸ್‌ನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram