ಜಮ್ಮು ಮತ್ತು ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವೆಂದು ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಪ್ರತಿಪಾದಿಸಿದ್ದಾರೆ.
ಕಾಶ್ಮೀರ ವಿಚಾರದಲ್ಲಿ ಅಂತರರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನದ ಮಾನವ ಹಕ್ಕು ಸಚಿವ ವಿಶ್ವಸಂಸ್ಥೆಯ 43ನೇ ಮಾನವಹಕ್ಕುಗಳ ಅಧಿವೇಶನದಲ್ಲಿ ಒತ್ತಾಯಿಸಿದ ಬೆನ್ನಲ್ಲೇ ಭಾರತದ ವಿದೇಶಾಂಗ ಸಚಿವಾಲಯದ ಪಶ್ಚಿಮ ವಿಭಾಗದ ಕಾರ್ಯದರ್ಶಿ ವಿಕಾಸ್ ಸ್ವರೂಪ್ ಜಮ್ಮು-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಪಾಕಿಸ್ತಾನ ಜಗತ್ತಿನಲ್ಲೇ ಭಯೋತ್ಪಾದನೆ ಮತ್ತು ಹಿಂಸೆಯನ್ನು ರಪ್ತು ಮಾಡುವ ಅಗ್ರ ರಾಷ್ಟ್ರವೆಂದು ಕಿಡಿಕಾರಿದ ವಿಕಾಸ್ ಸ್ವರೂಪ್ ಅದು ಮೊದಲು ಬೇರೆಯವರಿಗೆ ಉಪದೇಶ ಕೊಡುವುದನ್ನು ಬಿಟ್ಟು, ತನ್ನ ಪರಿಸ್ಥಿತಿ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪಾಕಿಸ್ತಾನಕ್ಕೆ ಮಾತಿನ ಚಾವಟಿ ಬೀಸಿದರು.
ಜಮ್ಮು ಕಾಶ್ಮೀರವನ್ನು ವಿಭಜಿಸಿ ಕೇಂದ್ರಾಡಳಿತ ಮಾಡಿರುವುದು ಭಾರತದ ಅಂತರಿಕ ವಿಚಾರವಾಗಿದ್ದು, ಈಗಾಗಲೇ ಪರಿಸ್ಥಿತಿ ಪೂರ್ಣ ನಿಯಂತ್ರಣದಲ್ಲಿದೆ ಎಂದು ಹೇಳಿದರು.
ಕ್ರೀಡಾಂಗಣದ ಹೆಸರಿನಲ್ಲಿ ಕಮಿಷನ್ ದಂಧೆ, ಮತಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಭದ್ರತೆಯೊಂದಿಗೆ ಕಾಂಗ್ರೆಸ್ ಚೆಲ್ಲಾಟ : ಆರ್. ಅಶೋಕ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆನೇಕಲ್ನಲ್ಲಿ ಉದ್ದೇಶಿತ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ...








