ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ
ಬೆಂಗಳೂರು : ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯನ್ನು ಕುಮಾರಸ್ವಾಮಿ ಖಂಡಿಸಿ ಸರಣಿ ಟ್ವೀಟ್ ಗಳ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕೆ ಮಾಡಿದ್ದಾರೆ.
ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ…
ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು?
ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ.
ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. 8/8#ಸರ್ವ_ಜನಾಂಗದ_ಶಾಂತಿಯ_ತೋಟ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 27, 2022
ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ.
ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.








