ಸಂಗೀತ ಲೋಕದ ಅರಸ ಎಸ್ ಪಿಬಿ ಅವರ ಅಗಲಿಕೆ ಅನೇಕ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
“ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ.
ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.