ಬೆಂಗಳೂರು: ಮಾಜಿ ಸಿಎಂ ಎಸ್ಎಂ ಕೃಷ್ಣ (SM Krishna) ಮತ್ತೆ ಮಣಿಪಾಲ್ ಆಸ್ಪತ್ರೆಗೆ(Manipal Hospital) ದಾಖಲಾಗಿದ್ದಾರೆ.
ಎರಡು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ಎಸ್ಎಂ ಕೃಷ್ಣ ದಾಖಲಾಗಿದ್ದಾರೆ. ಕಳೆದ ಬಾರಿ ದೀರ್ಘ ಕಾಲದವರೆಗೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಇಂದು ಮತ್ತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೂಟಿನ್ ಚೆಕಪ್ ಮಾಡಿ ಸೋಮವಾರ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವೀಟ್ ಮಾಡಿದ್ದು, ಶೀಘ್ರವೇ ಎಸ್ಎಂಕೆ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಈ ಕುರಿತು ಪೋಸ್ಟ್ ಮಾಡಿದ್ದಾರೆ.