ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವದ ಭಾರತ್ ಬ್ರ್ಯಾಂಡ್ ಅಕ್ಕಿ (Bharat Brand Rice)ಯೋಜನೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.
ಭಾರತ್ ಬ್ರಾಂಡ್ ಅಕ್ಕಿ ಯೋಜನೆಗೆ ವಸಂತ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ನೆಫೆಡ್ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಯಡಿಯೂರಪ್ಪ, ಮೋದಿ ಅವರ ನೇತೃತ್ವದಲ್ಲಿ ಬಡವರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಇಂತಹ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. 29 ರೂಪಾಯಿಗೆ ಕೆಜಿ ಅಕ್ಕಿ, ಗೋದಿ 50 ರೂ., ಹೆಸರು ಕಾಳು 90 ರೂ., ತೊಗರಿ ಬೇಳೆ 60 ರೂ. ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಇಂತಹ ಉತ್ತಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಹೆಮ್ಮೆಯ ಸಂಗತಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಹತ್ತು ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಹೇಳಿ, ಐದು ಕೆಜಿ ಅಕ್ಕಿ ಮಾತ್ರ ನೀಡುತ್ತಿದೆ. ಆದರೆ, ಕೇಂದ್ರ ಸರ್ಕಾರ ಅಕ್ಕಿ ದರ ಏರಿಕೆ ನಿಯಂತ್ರಿಸಲು ಈ ಯೋಜನೆ ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಈ ಅಕ್ಕಿಯನ್ನು ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಲ್ಲದೇ, ಆನ್ ಲೈನ್ ನಲ್ಲಿ ಕೂಡ ಖರೀದಿ ಮಾಡಬಹುದು.