ಮಾಜಿ ಸಂಸದ ವಿರೂಪಾಕ್ಷಪ್ಪ (Virupakshapa) ಬಿಜೆಪಿಗೆ ಸೇರ್ಪಡೆ
ಬೆಂಗಳೂರು : ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ವಿರೂಪಾಕ್ಷಪ್ಪ ಕೇಸರಿ ಪಡೆ ಸೇರಿಕೊಂಡರು
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ತಪ್ಪಿದ್ದರಿಂದ ವಿರೂಪಾಕ್ಷಪ್ಪ ಅವರು ಕಾಂಗ್ರೆಸ್ ಸೇರಿಕೊಂಡಿದ್ದರು.
ಇದು ಸ್ಥಳೀಯವಾಗಿ ಬಿಜೆಪಿಗೆ ದೊಡ್ಡ ಹೊಡೆತ ಕೊಟ್ಟಿತ್ತು. ಈ ಹಿನ್ನೆಲೆ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಸಿಂಧನೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಯ ನಂತರ ವಿರೂಪಾಕ್ಷಪ್ಪನವರ ನಿವಾಸಕ್ಕೆ ತೆರಳಿ ಗುಪ್ತ್ ಗುಪ್ತ್ ಮಾತುಕತೆ ನಡೆಸಿದ್ದರು.
ಸಿಎಂ ಪುತ್ರ ವಿರೂಪಾಕ್ಷಪ್ಪ ನಿವಾಸಕ್ಕೆ ಭೇಟಿ ನೀಡಿದ್ದದ್ದು ಸಿಂಧನೂರಿನಲ್ಲಿ ಭಾರಿ ಸದ್ದು ಮಾಡಿತ್ತು. ಶೀಘ್ರದಲ್ಲೇ ವಿರೂಪಾಕ್ಷಪ್ಪನವರು ಬಿಜೆಪಿ ಸೇರುತ್ತಾರೆ ಅಂತ ಹೇಳಲಾಗುತ್ತಿತ್ತು. ಅದರಂತೆ ಇದೀಗ ಅವರು ಬಿಜೆಪಿ ಸೇರಿದ್ದಾರೆ.