ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಡಾ. ಸತ್ಯನಾರಾಯಣ ಮೈಸೂರು ನೇತೃತ್ವದ ತಂಡದ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ. ಜ್ವರ ಹಾಗೂ ಗಂಟಲು ನೋವಿನಿಂದ ಹೆಚ್ಡಿಡಿ ಬಳಲುತ್ತಿದ್ದಾರೆ. ಆದರೆ, ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಚಿಕಿತ್ಸೆ ನೀಡಿದ ಡಾ.ಸತ್ಯನಾರಾಯಣ ಮಾತನಾಡಿ, ಉಸಿರಾಟದ ಸಮಸ್ಯೆಯಿಂದ ಅಡ್ಮಿಟ್ ಆಗಿದ್ದಾರೆ. ರೆಸ್ಪಿರೇಟರಿ ಇನ್ಫೆಕ್ಷನ್ ಆಗಿದೆ. ಜನರಲ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡ್ಮೂರು ದಿನ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ದೇವೇಗೌಡ ಅವರು, ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಉತ್ಪ್ರೇಕ್ಷಿತ ವರದಿಗಳು ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ನಾನು ವಾಡಿಕೆಯ ತಪಾಸಣೆಗಾಗಿ ಮಾತ್ರ ಆಸ್ಪತ್ರೆಯಲ್ಲಿದ್ದೇನೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನಾನು ಶೀಘ್ರದಲ್ಲಿಯೇ ಮನೆಗೆ ಹಿಂದಿರುಗುತ್ತೇನೆ. ಯಾವುದೇ ಆತಂಕ ಇಲ್ಲ ಎಂದು ಹೇಳಿದ್ದಾರೆ.