ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.
ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸಕ್ಕೆ ಭೇಟಿ ನೀಡಿರುವ ನಾಯಕರು, ಮಹತ್ವದ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಈ ವಿಷಯವನ್ನು ಸ್ವತಃ ಮೋದಿ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಲೋಕಕಲ್ಯಾಣ ಮಾರ್ಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಜೀ ಅವರನ್ನು ಭೇಟಿಯಾಗಿರುವುದು ಗೌರವದ ಸಂಗತಿ. ವಿವಿಧ ವಿಚಾರಗಳ ಬಗ್ಗೆ ಅವರಿಗಿರುವ ಬುದ್ಧಿವಂತಿಕೆ ಹಾಗೂ ಅವರ ಆಳವಾದ ದೃಷ್ಟಿಕೋನ ಅತ್ಯಂತ ಮೌಲ್ಯಯುತವಾಗಿದೆ ಎಂದು ಹೇಳಿದ್ದಾರೆ.
ವಿವೇಕಾನಂದ ಮೂರ್ತಿಯ ಮುಂದೆ ಧ್ಯಾನಸ್ಥರಾಗಿರುವ ಮೋದಿ ಅವರ ಕಲಾಕೃತಿಯನ್ನು ಉಡುಗೊರೆಯಾಗಿ ದೇವೇಗೌಡರು ನೀಡಿದ್ದಾರೆ. ಇದನ್ನು ಸ್ವೀಕರಿಸಿದ ಮೋದಿ, ಇದು ಕನ್ಯಾಕುಮಾರಿಗೆ ಭೇಟಿ ನೀಡಿದ ಕ್ಷಣಗಳತ್ತ ನನ್ನ ಮನಸ್ಸನ್ನು ಸೆಳೆಯಿತು. ಅದಕ್ಕಾಗಿ ನಾನು ಕೃತಜ್ಞನಾಗಿರುತ್ತೇನೆ ಎಂದು ಹೇಳಿದ್ದಾರೆ.
–