ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ – ಗಡಿಯಲ್ಲಿ ಬಿಗಿ ಭದ್ರತೆ
ದೆಹಲಿ: ಸುಮಾರು 6 -7 ತಿಂಗಳು ಕಾಲ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ರೈತರು ಇದೀಗ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲಿಯೇ ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೃಷಿ ಕಾನೂನನ್ನು ರದ್ದು ಪಡಿಸುವಂತೆ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ದೆಹಲಿ ಪೊಲೀಸರು ಬುಧವಾರ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ವಿವಿಧ ಪ್ರದೇಶಗಳಿಂದ ಪ್ರತಿಭಟನೆ ನಡೆಸಲು ರೈತರು ದೆಹಲಿಗೆ ಆಗಮಿಸುತ್ತಿದ್ದು, ಪೊಲೀಸರು ಸಿಂಘು ಗಡಿಯಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ.
ಜಂತರ್ ಮಂತರ್ನಲ್ಲಿ ಸಮುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಯಲ್ಲಿ 200 ಮಂದಿ ರೈತರು ಪಾಲ್ಗೊಳ್ಳಲಿದ್ದು, ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ 6 ಮಂದಿ ಬೆಳಗ್ಗೆ 11ರಿಂದ ಸಂಜೆ 5ರವರೆಗೆ ಪ್ರತಿಭಟನೆ ನಡೆಸಲಿದ್ದಾರೆ. ಅಲ್ಲದೇ ಕೋವಿಡ್-19 ನಿಯಮಗಳ ಅನುಸಾರ ರೈತರಿಗೆ ಪ್ರತಿಭಟನೆ ನಡೆಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.
ಬುಧವಾರ ಹೊರಡಿಸಿರುವ ಪ್ರಕಟಣೆಯಲ್ಲಿ ಬಸ್ ಮೂಲಕ ಆಗಮಿಸಿರುವ ರೈತರನ್ನು ಸಿಂಘು ಗಡಿಯಿಂದ ಜಂತರ್ ಮಂತರ್ ಗೆ ದೆಹಲಿ ಪೊಲೀಸರು ಕರೆದೊಯ್ಯಲಿದ್ದಾರೆ. ಅದರಲ್ಲಿಯೂ ಗುರುತಿನ ಚೀಟಿ ಹೊಂದಿರುವ ರೈತರಿಗೆ ಮಾತ್ರ ಪ್ರತಿಭಟನೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ.