ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಬೆದರಿಸಿ ದರೋಡೆ ಮಾಡುತ್ತಿದ್ದ ಖದೀಮರು
ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಬೆದರಿಸಿ ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಸಂಪಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೃತಿಕ್ ಗೌಡ (20), ನಿತಿನ್ ಗೌಡ (21), ಸಮಂತ್ (20), ದರ್ಶನ್ (20) ಬಂಧಿತ ಆರೋಪಿಗಳು. ಈ ನಾಲ್ವರು ಆರೋಪಿಗಳು ಊಬರ್ ಕ್ಯಾಬ್ ಬುಕ್ ಮಾಡಿ ಚಾಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದರು.
ಇದನ್ನೇ ಕಸುಬು ಮಾಡಿಕೊಂಡ ಖದೀಮರು ಸಾಕಷ್ಟು ಚಾಲಕರಿಂದ ದರೋಡೆ ಮಾಡುತ್ತಿದ್ದರು ಎನ್ನಲಾಗುತ್ತಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 5 ಲಕ್ಷದ ರೂಪಾಯಿ ಮೌಲ್ಯದ ಕಾರು, ಒಂದು ಬೈಕ್, ಮೊಬೈಲ್, 18ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಅಲ್ಲದೆ ನಗರದ ಮೊತ್ತೊಂದು ಕಡೆ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದು ಖದೀಮರು ಕಳ್ಳತನ ಮಾಡಿರುವ ಘಟನೆ ಬಾಗಲಕುಂಟೆ, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.
ಸುಮಾರು 10 ಕಾರುಗಳ ಗಾಜು ಒಡೆದು, ಕಾರಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಸಂಗೀತ್ ಕುಮಾರ್, ಅನಂತಸ್ವಾಮಿ, ಮಂಜುನಾಥ ನಾಯ್ಕ, ಸಚಿನ್, ದಿನೇಶ್,ಭೈರೇಗೌಡ, ತಿಲಕ್ ರಾಜ್, ಬಸವರಾಜು, ಹರ್ಷ, ಅರುಣ್ ಎಂಬುವರಿಗೆ ಸೇರಿದ ಕಾರುಗಳಲ್ಲಿ ಕಳ್ಳತನ ಮಾಡಲಾಗಿದೆ.
ಇನ್ನೂ ಕಳ್ಳರ ಗ್ಯಾಂಗ್ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ದೋಚಿದ್ದಾರೆ. ಬಾಗಲಕೋಟೆ ಠಾಣಾ ವ್ಯಾಪ್ತಿಯಲ್ಲಿ 7 ಕಾರುಗಳು, ಸೋಲದಹಳ್ಳಿ ವ್ಯಾಪ್ತಿಯಲ್ಲಿ 3 ಕಾರಿನ ಗಾಜು ಒಡೆದು ಕೃತ್ಯ ಎಸಗಲಾಗಿದೆ.