ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಹತ್ತಿರ ಈ ಘಟನೆ ನಡೆದಿದೆ. ಓಮ್ನಿ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದಾಗಿ ಈ ಘಟನೆ ನಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು ಹೋಗಿ ಓಮ್ನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.