ADVERTISEMENT
Friday, June 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅಪ್ಪಟ ದೈವಭಕ್ತ ಡಿಕೆಶಿ: ಕಾಂಗ್ರೆಸ್ ವಿರುದ್ಧದ ಹಿಂದೂ ವಿರೋಧಿ ಪಟ್ಟ ಇನ್ನು ನಡೆಯದು; ಬಿಜೆಪಿಯ ತಂತ್ರಗಾರಿಕೆಗೆ ಬ್ರೇಕ್ ಹಾಕಿದ ಡಿಕೆಶಿಯ ಸಂಪ್ರದಾಯಬದ್ಧ ರಾಜಕಾರಣ

Shwetha by Shwetha
June 5, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲಾ ಧರ್ಮದ ಧಾರ್ಮಿಕ ಮುಖಂಡರುಗಳ ಉಪಸ್ಥಿತಿ. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ನೊಣವಿನಕೆರೆ ಅಜ್ಜಯ್ಯನಿಗೆ ನಮಸ್ಕಾರ. ಪ್ರಮಾಣ ವಚನ ಸ್ವೀಕರಿಸಿದ್ದೂ ಅಜ್ಜಯ್ಯನ ಹೆಸರಿನಲ್ಲಿ. ಅಷ್ಟೇ ಯಾಕೆ, ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೂ ಮುನ್ನ ವಿಧಾನಸೌಧದ ಕೊಠಡಿಯಲ್ಲಿ ನೊಣವಿನಕೆರೆ ಸ್ವಾಮೀಜಿಗಳಿಂದ ಪೂಜೆ ಹಾಗೂ ವಿಧಾನಸೌಧದ ಮೆಟ್ಟಿಲುಗಳಿಗೆ ನೀರಿನ ಪ್ರೋಕ್ಷಣೆ.

ಹೀಗೆ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಪೂರ್ತಿ ಧಾರ್ಮಿಕ ಸಂಪ್ರದಾಯದಂತೆ ನಡೆದಿತ್ತು.

Related posts

ನಾನು ಹುದ್ದೆಗಳನ್ನು ಎಂದಿಗೂ ಬಯಸದ ಕಾಂಗ್ರೆಸ್ ಕಾರ್ಯಕರ್ತ: ನೂತನ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ನಾನು ಹುದ್ದೆಗಳನ್ನು ಎಂದಿಗೂ ಬಯಸದ ಕಾಂಗ್ರೆಸ್ ಕಾರ್ಯಕರ್ತ: ನೂತನ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

June 5, 2026
ಯತೀಂದ್ರಗೆ ಸಚಿವ ಪಟ್ಟ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಿದ್ದು ಪುತ್ರನ ಅರ್ಹತೆ ಪ್ರಶ್ನಿಸಿದ ಕೈ ನಾಯಕರು

ಯತೀಂದ್ರಗೆ ಸಚಿವ ಪಟ್ಟ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಿದ್ದು ಪುತ್ರನ ಅರ್ಹತೆ ಪ್ರಶ್ನಿಸಿದ ಕೈ ನಾಯಕರು

June 5, 2026

ಬಹುಷಃ ಬಿಜೆಪಿಯ ನಾಯಕರು ಇಷ್ಟೊಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಾರೋ ಗೊತ್ತಿಲ್ಲ, ಡಿಕೆ ಶಿವಕುಮಾರ್ ಅವರು ಸಿಎಂ ಆಗುವುದಕ್ಕಿಂದ ಮೊದಲು ಹಾಗೂ ನಂತರದಲ್ಲೂ ಧಾರ್ಮಿಕ ಸಂಪ್ರದಾಯಗಳನ್ನು ಹಾಗೂ ದೈವ ಭಕ್ತಿಯ ಉತ್ಕೃಷ್ಟತೆಯನ್ನು ಪ್ರದರ್ಶನ ಮಾಡಿದ್ದಾರೆ. ಈ ಮೂಲಕ ನಾನೊಬ್ಬ ಅಪ್ಪಟ ದೈವ ಭಕ್ತ ಎಂಬುವುದನ್ನು ಸಾಬೀತು ಮಾಡಿದ್ದಾರೆ. ಹೀಗಿರುವಾಗ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕರು ಟಾರ್ಗೆಟ್ ಮಾಡುವಾಗ ಹಿಂದೂ ವಿರೋಧಿ ಎನ್ನಲು ಸಾಧ್ಯವಿಲ್ಲ. ಹಿಂದುತ್ವ ಹೋರಾಟ ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ.

ಈ ಹಿಂದೆ ಸದನದಲ್ಲಿ ಸದಾ ವತ್ಸಲೆ ಮಾತೃ ಭೂಮಿ ಹಾಡಿ ಡಿಕೆ ಶಿವಕುಮಾರ್ ವಿವಾದ ಸೃಷ್ಟಿಸಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು. ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂಬ ಚರ್ಚೆಗಳು ನಡೆದಿದ್ದವು. ಆದರೆ ಡಿಕೆಶಿಗೆ ಈ ವಿಚಾರ ಹಿನ್ನಡೆ ಆಗಿರಲಿಲ್ಲ. ಬದಲಾಗಿ ಬಿಜೆಪಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿತ್ತು. ಬಿಜೆಪಿ ಪಾಲಿಗೆ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದರು.

ಸಿದ್ದು ಟಾರ್ಗೆಟ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ ಹಿಂದೂ ವಿರೋಧಿಯಾಗಿ ನಡೆದುಕೊಳ್ಳಲಿದೆ ಎಂಬ ವಾದವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಹಾಗೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ ಎಂಬ ಆರೋಪ ಬಿಜೆಪಿಯದ್ದಾಗಿತ್ತು. ಈ ಕಾರಣಕ್ಕಾಗಿ ಸಿದ್ದರಾಮಯ್ಯ ಅವರಿಗೆ ಸಿದ್ದರಾಮುಲ್ಲಾ ಖಾನ್ ಎಂದೂ ಬಿಜೆಪಿ ನಾಯಕರು ನಾಮಕರಣ ಮಾಡಿ ಟೀಕೆ ಮಾಡುತ್ತಿದ್ದರು.

ಸಿದ್ದರಾಮಯ್ಯ ಅವರು ಸದಾ ಮೌಡ್ಯದ ವಿರುದ್ದ ಮಾತನಾಡುತ್ತಿದ್ದರು. ಅಲ್ಲದೆ, ಅಂಬೇಡ್ಕರ್, ಬಸವ ತತ್ವ, ಪ್ರಗತಿಪರ ಚಿಂತನೆಯ ಪರವಾಗಿ ಧ್ವನಿ ಎತ್ತುತ್ತಿದ್ದರು. ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರೂ, ಅತೀವ ನಂಬಿಕೆಯನ್ನು ಪ್ರದರ್ಶನ ಮಾಡಿದವರಲ್ಲ. ಆದರೆ ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಭಿನ್ನವಾಗಿ ನಡೆದುಕೊಳ್ಳುತ್ತಿದ್ದರು.

ಕಾಂಗ್ರೆಸ್ ಪಕ್ಷ ಕುಂಬಮೇಳದ ಬಗ್ಗೆ ಭಿನ್ನ ನಿಲುವು ಹೊಂದಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಕುಂಭ ಮೇಳದಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಜಗ್ಗಿ ವಾಸುದೇವ ಅವರ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಂಡಿದ್ದರು. ಇವೆಲ್ಲವೂ ಚರ್ಚೆಗೆ ಒಳಗಾಗಿತ್ತು. ಹೀಗಿದ್ದರೂ ಡಿಕೆ ಶಿವಕುಮಾರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು.
ಬಿಜೆಪಿ ನಡೆ ಏನಾಗಲಿದೆ?

ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದ ಬಿಜೆಪಿಗೆ ಇದೀಗ ತನ್ನ ತಂತ್ರಗಾರಿಕೆಯನ್ನು ಬದಲಾವಣೆ ಮಾಡಬೇಕಾಗಿದೆ. ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದಂತೆ ಡಿಕೆ ಶಿವಕುಮಾರ್ ಅವರನ್ನು ಬಿಂಬಿಸಲು ಸಾಧ್ಯವಿಲ್ಲ. ಅವರ ನಡೆ ನುಡಿಗಳೇ ಬಿಜೆಪಿ ವಾದವನ್ನು ಸೋಲಿಸುತ್ತದೆ. ಹೀಗಿರುವಾಗ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಭಿನ್ನ ತಂತ್ರಗಾರಿಕೆಯನ್ನು ಪ್ರಯೋಗ ಮಾಡುವ ಸಾಧ್ಯತೆ ಇದೆ.

ಹಿಂದುತ್ವದ ವಿಚಾರವನ್ನು ಹೆಚ್ಚಾಗಿ ಪ್ರಸ್ತಾಪ ಮಾಡದೆ ಸರ್ಕಾರದ ವೈಫಲ್ಯಗಳು ಹಾಗೂ ಡಿಕೆ ಶಿವಕುಮಾರ್ ಅವರ ವಿರುದ್ಧದ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜನಾಭಿಪ್ರಾಯ ರೂಪಿಸುವ ಪ್ರಯತ್ನವನ್ನು ನಡೆಸಬಹುದು. ಆದರೆ ಅದರಲ್ಲಿ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತಾರೆ? ಎಂಬುವುದು ಸದ್ಯದ ಕುತೂಹಲ.

ShareTweetSendShare
Join us on:

Related Posts

ನಾನು ಹುದ್ದೆಗಳನ್ನು ಎಂದಿಗೂ ಬಯಸದ ಕಾಂಗ್ರೆಸ್ ಕಾರ್ಯಕರ್ತ: ನೂತನ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ನಾನು ಹುದ್ದೆಗಳನ್ನು ಎಂದಿಗೂ ಬಯಸದ ಕಾಂಗ್ರೆಸ್ ಕಾರ್ಯಕರ್ತ: ನೂತನ KPCC ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

by Shwetha
June 5, 2026
0

ನೂತನ KPCC ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರು ತಮ್ಮ ನೇಮಕಾತಿಗೆ ಸಂತಸ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು...

ಯತೀಂದ್ರಗೆ ಸಚಿವ ಪಟ್ಟ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಿದ್ದು ಪುತ್ರನ ಅರ್ಹತೆ ಪ್ರಶ್ನಿಸಿದ ಕೈ ನಾಯಕರು

ಯತೀಂದ್ರಗೆ ಸಚಿವ ಪಟ್ಟ ಕಾಂಗ್ರೆಸ್‌ನಲ್ಲಿ ಬಂಡಾಯದ ಕಿಡಿ: ಸಿದ್ದು ಪುತ್ರನ ಅರ್ಹತೆ ಪ್ರಶ್ನಿಸಿದ ಕೈ ನಾಯಕರು

by Shwetha
June 5, 2026
0

ಕರ್ನಾಟಕ ರಾಜಕಾರಣದಲ್ಲಿ ಹೈಡ್ರಾಮಾ ಮುಂದುವರಿದಿದ್ದು, ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟ ರಚನೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನದ ಸ್ಫೋಟ ಸಂಭವಿಸಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ...

ಟ್ರೋಲ್ ಪೇಜ್‌ಗಳ ಪಾಲಿನ ಕ್ರಶ್ ನಾನು : ಟ್ರೋಲ್ ಮಾಡುವವರಿಗೆ ಪ್ರದೀಪ್ ಈಶ್ವರ್ ಪಂಚ್

ಟ್ರೋಲ್ ಪೇಜ್‌ಗಳ ಪಾಲಿನ ಕ್ರಶ್ ನಾನು : ಟ್ರೋಲ್ ಮಾಡುವವರಿಗೆ ಪ್ರದೀಪ್ ಈಶ್ವರ್ ಪಂಚ್

by Shwetha
June 5, 2026
0

ರಾಜ್ಯ ರಾಜಕೀಯದ ಇತ್ತೀಚಿನ ಬಿರುಗಾಳಿಯ ನಡುವೆ ಚಿಕ್ಕಬಳ್ಳಾಪುರದ ಫೈರ್‌ಬ್ರ್ಯಾಂಡ್ ಶಾಸಕ ಪ್ರದೀಪ್ ಈಶ್ವರ್ ಮತ್ತೆ ಸದ್ದು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ರಾಜೀನಾಮೆ ಸಂದರ್ಭದಿಂದ ಹಿಡಿದು ಸಚಿವ ಸ್ಥಾನದ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 5, 2026
0

ದಿನ ಭವಿಷ್ಯ : 05-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನ. ಗ್ರಹಗಳ ಅನುಕೂಲಕರ ದೃಷ್ಟಿಯಿಂದ ಉದ್ಯೋಗದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ವ್ಯಾಪಾರಸ್ಥರಿಗೆ...

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

by Shwetha
June 4, 2026
0

ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಬುಧವಾರ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram