ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ದಾಳಿ ಖಂಡಿಸಿದ ಭಾರತ
ಇಸ್ರೇಲ್ ನ ಗಾಜಾಪಟ್ಟಿಯಲ್ಲಿ ಎಲ್ಲಿ ನೋಡಿದ್ರು ಹೆಣಗಳ ರಾಶಿ , ಹಿಂಸಾತ್ಮಕ ವಾತಾವರಣ ನಿರ್ಮಾಣವಾಗಿದೆ.. ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ದಾಳಿಗೆ ಅಲ್ಲಿನ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಹಮಾಸ್ ಉಗ್ರರ ವಿರುದ್ಧ ಮುಗಿಬಿದ್ದಿರುವ ಇಸ್ರೇಲ್ ಸೇನೆ ಸೋಮವಾರವೂ ಗಾಜಾ ಪಟ್ಟಿಯ ಮೇಲೆ ಬಾಂಬ್ ದಾಳಿ ಮುಂದುವರಿಸಿವೆ.
ಉಗ್ರ ಸಂಘಟನೆಯ 9 ಕಮಾಂಡರ್ಗಳು ಅಡಗಿದ್ದ ಸುರಂಗಗಳನ್ನು ಗುರಿಯಾಗಿರಿಸಿ ದಾಳಿ ನಡೆಸಲಾಗಿದೆ. ಇಸ್ರೇಲ್ ಸೇನೆ ಹೇಳಿಕೊಂಡ ಪ್ರಕಾರ 15 ಕಿ. ಮೀ. ಉದ್ದದ ರಹಸ್ಯ ಸುರಂಗವನ್ನು ನಾಶಗೊಳಿಸಲಾಗಿದೆ. ಕಳೆದ ಸೋಮವಾರ ಆರಂಭವಾಗಿರುವ ವೈಮಾನಿಕ ದಾಳಿಯಲ್ಲಿ ಇದುವರೆಗೆ 55 ಮಕ್ಕಳು, 33 ಮಹಿಳೆಯರೂ ಸೇರಿದಂತೆ 200ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. 1,230ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಗಾಜಾ ಸಿಟಿಗೆ 3 ದಿನಗಳಿಂದ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಮತ್ತೊಂದೆಡೆ ದಕ್ಷಿಣ ಇಸ್ರೇಲ್ ನ ಬೀರ್ಶೆಬಾ ನಗರದ ಮೇಲೆ ಹಮಾಸ್ ಉಗ್ರರು ರಾಕೆಟ್ ದಾಳಿ ನಡೆಸಿದ ವೇಳೆ, ಸ್ಥಳೀಯ ಕ್ರಿಕೆಟ್ ಕ್ಲಬ್ ಭಾರತೀಯ ಸಂಶೋಧಕರನ್ನು ರಕ್ಷಿಸಿದೆ. ಕ್ರಿಕೆಟ್ ಕ್ಲಬ್ ಹೊಂದಿರುವ ನೆಲಮಾಳಿಗೆಯಲ್ಲಿ ಸಂಶೋಧಕರು ಮತ್ತು ಸ್ಥಳೀಯರಿಗೆ ರಕ್ಷಣೆ ನೀಡಲಾಗಿದೆ.
ಇನ್ನೂ ವಿಶ್ವಸಂಸ್ಥೆಯಲ್ಲಿ ಭಾರತದ ಶಾಶ್ವತ ರಾಯಭಾರಿ ಟಿ.ಎಸ್.ತಿರುಮೂರ್ತಿ, ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ದಾಳಿ ಖಂಡಿಸಿದ್ದಾರೆ. ಕೇರಳದ ಸೌಮ್ಯಾ ಸಂತೋಷ್ ಸೇರಿದಂತೆ ಹಲವರ ಜೀವಹಾನಿ ಒಪ್ಪತಕ್ಕದ್ದಲ್ಲ ಎಂದಿದ್ದಾರೆ. ಭಾರತ ಪ್ಯಾಲೆಸ್ತೀನ್ ವಿಚಾರಕ್ಕೆ ಮಾತ್ರ ಬೆಂಬಲ ನೀಡುತ್ತದೆ. 2 ಪ್ರತ್ಯೇಕ ರಾಷ್ಟ್ರಗಳ ರಚನೆ ಕೂಡ ಭಾರತಕ್ಕೆ ಸ್ವೀಕಾರಾರ್ಹ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.