ಕೊಡಗು ಜಿಲ್ಲೆಯಲ್ಲಿ ಮತ್ತೆ ಗಜರಾಜನ ಹಾವಳಿ ಶುರುವಾಗಿದ್ದು ಜನರು ಆತಂಕ ಪಡುವಂತಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಮುಖ್ಯ ರಸ್ತೆಯಲ್ಲಿ ಒಂಟಿಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಹೋಗಿದ್ದು, ಜನರು ಭಯಭೀತರಾಗಿದ್ದಾರೆ.
ಕಾಡಿನಲ್ಲಿ ಕಾಫಿ ತೋಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಡಾನೆ ಸದ್ಯ ಪಟ್ಟಣದೊಳಗೆ ನುಗ್ಗಿದ್ದು, ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಗಜರಾಜನ ನಡೆ ಈಗ ಮೊಬೈಲ್ ನಲ್ಲಿ ಸೆರೆಯಾಗಿದೆ. ಪೊನ್ನಂಪೇಟೆ ಭಾಗದಲ್ಲಿ ಕಾಡಾನೆಗಳ ದಾಳಿ ವಿಪರೀತವಾಗಿದ್ದು, ಈ ಭಾಗದ ಹೆಚ್ಚು ಜನರು ದಾಳಿಗೆ ಬಲಿಯಾಗಿದ್ದಾರೆ. ಈ ಕಾಡಾನೆ ನ್ಯಾಯಾಲಯದ ಹತ್ತಿರ ಪ್ರತ್ಯಕ್ಷವಾಗಿ ಅರಣ್ಯ ಕಾಲೇಜು ಗದ್ದೆ ಮೂಲಕ ಮುಖ್ಯ ರಸ್ತೆಯಲ್ಲಿ ಓಡಾಡಿದೆ. ಅರಣ್ಯ ಸಿಬ್ಬಂದಿ ಇದನ್ನು ಕಾಡಿಗಟ್ಟಲು ಹರಸಾಹಸ ಪಟ್ಟಿದ್ದಾರೆ.