ಇದೇ ಮೊದಲ ಭಾರಿಗೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ…
ಹುಬ್ಬಳ್ಳಿ-ಧಾರವಾಡದ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.
ಈದ್ಗಾ ಮೈದಾನದಲ್ಲಿ ಧಾರ್ಮಿಕ ಕ್ರಿಯೆಗಳಿಗೆ ಅನುಮತಿಯನ್ನು ಪ್ರಶ್ನಿಸಿ ಅಂಜುಮಾನ್ ಮುಸ್ಲಿಂ ಕಮಿಟಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಗಣೇಶೋತ್ವವ ಆಚರಣೆಗೆ ಅನುಮತಿ ನೀಡಿದೆ. ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಅಂಜುಮಾನ್ ಮುಸ್ಲಿಂ ಕಮಿಟಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಇದೇ ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುತ್ತಿದ್ದು, 1,500 ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಪೊಲೀಸ್ ಕಮಿಷನರ್ ಲಾಭೂರಾಮ್ ಸ್ಥಳಕ್ಕೆ ಧಾವಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ.
ಧಾರವಾಡದಲ್ಲಿ ಪರಿಸ್ಥಿತಿ ಸಂಪೂರ್ಣ ಶಾಂತಿಯುತವಾಗಿದ್ದು, ಗಣೇಶ ಹಬ್ಬಕ್ಕೆ ವಿಸ್ತೃತ ವ್ಯವಸ್ಥೆ ಮಾಡಲಾಗಿದೆ. ನಾವು ಇತರ ಭದ್ರತಾ ಸಿಬ್ಬಂದಿಯೊಂದಿಗೆ 1 ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಿದ್ದೇವೆ. ಎಂದು ಲಾಭು ರಾಮ್, ಸಿಪಿ ಹುಬ್ಬಳ್ಳಿ-ಧಾರವಾಡದ ನಗರ ಪೊಲೀಸ್ ಆಯುಕ್ತ ಲಾಬು ರಾಮ್ ತಿಳಿಸಿದ್ದಾರೆ.








