ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಅಂತ್ಯಸoಸ್ಕಾರವನ್ನೂ ಮುಗಿಸಿದ ಪಾಪಿಗಳು..!
ನವದೆಹಲಿ : ದೆಹಲಿಯಲ್ಲಿ ಮನುಕುಲವೇ ಬೆಚ್ಚಿ ಬೀಳುವಂತಹ ಘಟನೆಯೊಂದು ನಡೆದುಹೋಗಿದೆ.. ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಬಳಿಕ ಆಕೆಯನ್ನು ಕೊಲೆಗೈದು ಅಂತ್ಯಸಂಸ್ಕಾರ ಕೂಡ ನೆರವೇರಿಸಿದ ಅಮಾನವೀಯ ಘಟನೆ ದೆಹಲಿಯ ಕಂಟೋನ್ಮೆಂಟ್ ಏರಿಯಾದ ನಂಗಲ್ ಗ್ರಾಮದಲ್ಲಿ ನಡೆದಿದೆ.
9 ರ್ಷದ ಬಾಲಕಿ ಮೇಲೆ ದುಷ್ರ್ಮಿಗಳು ಅತ್ಯಾಚಾರವೆಸಗಿ ಬಳಿಕ ಆಕೆಯನ್ನು ರ್ಬರವಾಗಿ ಕೊಲೆಗೈದು ನಂತರ ಸುಟ್ಟುಹಾಕಿದ್ದಾರೆ. ಇಷ್ಟೆಲ್ಲ ಮಾಡಿದ ಬಳಿಕ ಬಾಲಕಿಯ ಪೋಷಕರಿಗೆ ಕರೆ ಮಾಡಿರುವ ದುಷ್ರ್ಮಿಗಳು, ವಿದ್ಯುತ್ ಶಾಕ್ ನಿಂದ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ. ಅಲ್ಲದೆ ಈ ವಿಚಾರವನ್ನು ಪೊಲೀಸರಿಗೆ ತಿಳಿಸದಂತೆಯೂ ಹೇಳಿದ್ದಾರೆ. ರ್ಚಕ ಹಾಗೂ ಅಲ್ಲೇ ಇದ್ದ ಇನ್ನಿಬ್ಬರು ವ್ಯಕ್ತಿಗಳು ಪೊಲೀಸರಿಗೆ ಕರೆ ಮಾಡದಂತೆ ಬಾಲಕಿಯ ತಾಯಿಗೆ ಹೇಳಿದ್ದಾರೆ. ಒಂದು ವೇಳೆ ನೀವೇನಾದರೂ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದರೆ, ಮರಣೋತ್ತರ ಪರೀಕ್ಷೆ ನಡೆಸುತ್ತಾರೆ. ಆಗ ಬಾಲಕಿಯ ಅಂಗಾಂಗಗಳನ್ನು ಕದಿಯುತ್ತಾರೆ ಎಂದು ಹೇಳುವ ಮೂಲಕ ತಾಯಿಯನ್ನು ಬೆದರಿಸಿದ್ದಾರೆ.
ಕೊನೆಗೆ ತಾಯಿಯ ಒಪ್ಪಿಗೆ ಇಲ್ಲದೇ ಬಾಲಕಿಯ ದೇಹವನ್ನು ಸುಟ್ಟು ಹಾಕಿದ್ದಾರೆ. ಇದರಿಂದ ಕೋಪಗೊಂಡ ತಾಯಿ ತನ್ನ ಗಂಡನಿಗೆ ವಿಷಯ ತಿಳಿಸಿದ್ದಾರೆ. ಜೊತೆಗೆ ಸುಮಾರು 200 ಮಂದಿ ಗ್ರಾಮಸ್ಥರು ಸ್ಮಶಾನಕ್ಕೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರ್ಚಕನನ್ನು ಬಂಧಿಸಿದ್ದಾರೆ.
ಬಾಲಕಿಯ ತಾಯಿಗೆ ಅನುಮಾನ ಬಂದಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.. ದೂರಿನಲ್ಲಿ ತನ್ನ ಮಗಳ ದೇಹದ ಮೇಲೆ ಗಾಯದ ಕಲೆಗಳಿದ್ದವು. ಆಕೆಯ ಮೊಣಕೈ, ಮಣಿಕಟ್ಟಿನ ಮೇಲೆ ಗಾಯಗಳಾಗಿದ್ದವು. ಜೊತೆಗೆ ತುಟಿಗಳು ನೀಲಿ ಬಣ್ಣಕ್ಕೆ ತಿರುಗಿದ್ದವು ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಬಾಲಕಿ ಸಂಜೆ 5.30ರ ಸುಮಾರಿಗೆ ಮನೆಯಿಂದ ಹೊರಬಂದಿದ್ದಳು. ಸ್ಮಶಾನದಲ್ಲಿರುವ ವಾಟರ್ ಕೂಲರ್ ನಿಂದ ಕೋಲ್ಡ್ ವಾಟರ್ ತರಲು ಹೋಗಿದ್ದ ಬಾಲಕಿ ಮನೆಗೆ ವಾಪಸ್ ಬರಲೇ ಇಲ್ಲ. ಇತ್ತ 6 ಗಂಟೆ ಸುಮಾರಿಗೆ ಸ್ಮಶಾನದ ರ್ಚಕ ಹಾಗೂ ಮತ್ತಿಬ್ಬರು ಬಾಲಕಿಯ ತಾಯಿಯನ್ನು ಕರೆದು ರುದ್ರಭೂಮಿಯಲ್ಲಿ ಬಿದ್ದಿದ್ದ ಅಪ್ರಾಪ್ತೆಯ ಶವವನ್ನು ತೋರಿಸಿದರು. ಜೊತೆಗೆ ವಾಟರ್ ಕೂಲರ್ ನಿಂದ ಕುಡಿಯುವ ನೀರನ್ನು ತೆಗೆದುಕೊಳ್ಳುವಾಗ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ವಿವರಣೆ ಕೂಡ ನೀಡಿದ್ದಾರೆ.