ಜೈಲಿನೊಳಗೆ ಗಾಂಜಾ ಎಸೆಯುತ್ತಿದ್ದ ವ್ಯಕ್ತಿಯ ಬಂಧನ
ಬಳ್ಳಾರಿ: ಜೈಲಿಜನೊಳಗೆ ಗಾಂಜಾ ಎಸೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಪ್ರಭು ಎಂಬುವುನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಂದ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈತ ವಡ್ಡರಬಂಡೆಯ ನಿವಾಸಿಯಾಗಿದ್ದು, ಕಲ್ಲೆಸೆಯುವ ಮೂಲಕ ಜೈಲಿನೊಳಗೆ ಗಾಂಜಾ ಕಳುಹಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಕಾರಾಗೃಹದ ಸುತ್ತಮುತ್ತ ಹಾಗೂ ಜೈಲಿನ ಒಳಗೆ ಹೋಗುವವರನ್ನು ತಪಾಸಣೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅದಾವತ್ ಮಾಹಿತಿ ನೀಡಿದ್ದಾರೆ.
ಪರಪ್ಪನ ಅಗ್ರಹಾರ ಹೊರತುಪಡಿಸಿದರೆ, ರಾಜ್ಯದ ಅತಿ ದೊಡ್ಡದಾದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಕಾಸು ಕೊಟ್ಟವರಿಗೆ ರಾಜಾತಿಥ್ಯ ಎಂಬ ಆರೋಪವಿತ್ತು. ಇಂತಹ ಕಾನೂನು ಬಾಹಿರ ಕೃತ್ಯಗಳಿಗೆ ಬ್ರೇಕ್ ಹಾಕಲು ಸರ್ಕಾರ ಕೈಗಾರಿಕಾ ಭದ್ರತಾ ಪಡೆ ನಿಯೋಜಿಸಿದೆ.