ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸೀರಿಯಲ್‌ನಲ್ಲಿ ನಟಿಸೋಕೆ ಗೌರೀಶ್‌ ಅಕ್ಕಿ ರೆಡಿ:

JioCinemaದಲ್ಲಿ ಎಕ್ಸ್‌ಕ್ಲೂಸಿವ್ ಸಂದರ್ಶನ!

admin by admin
October 24, 2023
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸೀರಿಯಲ್‌ನಲ್ಲಿ ನಟಿಸೋಕೆ ಗೌರೀಶ್‌ ಅಕ್ಕಿ ರೆಡಿ: JioCinemaದಲ್ಲಿ ಎಕ್ಸ್‌ಕ್ಲೂಸಿವ್ ಸಂದರ್ಶನ!
‘ಎಲ್ಲವೂ ಇತ್ತು ಅಲ್ಲಿ… ಊಟ ಇತ್ತು, ನಿದ್ರೆ ಇತ್ತು, ಆಟ ಇತ್ತು, ಸ್ಪರ್ಧಿಗಳಿದ್ದರು, ಜನ ಇದ್ರು ಎಲ್ಲಾನೂ ಇತ್ತು. ಆದ್ರೆ ಅಲ್ಲಿ ಒಂದೇ ಒಂದು ಇರ್ಲಿಲ್ಲ. ಅದು ಸ್ವಾತಂತ್ರ್ಯ! ಕಂಡೀಷನ್ಡ್ ಸ್ವಾತಂತ್ರ್ಯ ಇದೆ ಅಲ್ಲಿ. ಅದ್ರ ಬ್ಯೂಟಿನೇ ಅದು’

ಹೀಗೆಂದವರು ಬೇರೆ ಯಾರೂ ಅಲ್ಲ. ಕಳೆದ ವಾರ ಬಿಗ್‌ಬಾಸ್‌ ಮನೆಯಿಂದ ಹೊರಬಿದ್ದ ಹಿರಿಯ ಪತ್ರಕರ್ತ, ನಿರ್ದೇಶಕ ಗೌರೀಶ ಅಕ್ಕಿ. ಬಿಗ್‌ಬಾಸ್‌ ಮನೆಯೊಳಗಿಂದ ಹೊರಬಂದ ತಕ್ಷಣ JioCinemaಗೆ ನೀಡಿರುವ ಎಕ್ಸ್ ಕ್ಲೂಸಿವ್ ಸಂದರ್ಶನದಲ್ಲಿ ಅವರು ಮನೆಯೊಳಗಿನ ಅನುಭವವವನ್ನು ವಿವರವಾಗಿ ಹಂಚಿಕೊಂಡಿದ್ದಾರೆ. ಅದು JioCinemaದಲ್ಲಿ ಉಚಿತವಾಗಿ ನೇರಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಕನ್ನಡದ ‘ಬಿಗ್‌ ಬ್ಯಾಂಗ್‌: ಎಕ್ಸಿಟ್ ಇಂಟರ್‌ವ್ಯೂ’ದಲ್ಲಿ ದಾಖಲಾಗಿದೆ.

Related posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

February 3, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026

ಅವರ ಅನುಭವವನ್ನು ಅವರ ಮಾತುಗಳಲ್ಲಿಯೇ ಕೇಳಿ.
‘ಬಿಗ್‌ಬಾಸ್‌ ಜರ್ನಿ ಮುಗಿಸಿಕೊಂಡು ಹೊರಗಡೆ ಬಂದಿದೀನಿ. ಹಾಗೆ ನೋಡಿದ್ರೆ ಚಿಕ್ಕ ಪ್ರಯಾಣವಿದು. ಆದರೆ ಸಾಕಷ್ಟು ಅನುಭವಗಳಾಗಿವೆ. ಹದಿನೈದು ದಿನಗಳ ಪ್ರಯಾಣದಲ್ಲಿ ನಾನು ನೂರಕ್ಕೆ ನೂರು ಕೊಡದಿದ್ದರೂ 99 ಶೇ. ಕೊಟ್ಟಿದ್ದೇನೆ ಎಂದುಕೊಂಡಿದ್ದೇನೆ.

ಬೇಸರಕ್ಕಿಂತ ಖುಷಿಯೇ ಜಾಸ್ತಿ ಇದೆ ಅಂದುಕೊಂಡರೂ ತಪ್ಪಿಲ್ಲ. ಯಾಕೆಂದರೆ ನಾನು ನಾಮಿನೇಟ್‌ ಆದಾಗ, ಎಲ್ಲ ಲೆಕ್ಕ ಹಾಕ್ತಿದ್ದೆ. ಆಗ ಎಲ್ಲೊ ಒಂದು ಕಡೆ ಅನಿಸಿತ್ತು, ನಾನು ಹೊರಗಡೆ ಬರ್ತೀನಿ ಅಂತ.

ಒಂದು ವಿಷಯಹೇಳ್ಬೇಕು. ನಾನು ವಯಸ್ಸಲ್ಲಿ ಉಳಿದವರಿಗಿಂತ ದೊಡ್ಡವನಾಗಿದ್ದರೂ, ಮೆಂಟಲಿ, ಮೆಚ್ಯೂರ್ಡ್‌ ಆಗಿದ್ದರೂ ಕೂಡ ‘ಯಂಗ್‌ ಅಟ್ ಹಾರ್ಟ್‌’ ಅಂತಾರಲ್ಲಾ… ಆ ಥರ ಇದ್ದೀನಿ. ಕೆಲವರು ವಯಸ್ಸಲ್ಲಿ ಚಿಕ್ಕವರಿದ್ದಾಗ ಜನರೇಷನ್ ಗ್ಯಾಪ್ ಆಗತ್ತೆ. ಹಾಗಾಗಿ ಅವರ ಜೊತೆ ಬೆರೆಯಲು ಸಾಧ್ಯವಾಗ್ತಿರ್ಲಿಲ್ಲ.

ಫಸ್ಟ್ ಹೋದಾಗ ಬಿಗ್‌ಬಾಸ್‌ ಬಗ್ಗೆ ಒಂದು ಒಳ್ಳೆಯ ಇಂಪ್ರೆಷನ್ ಕ್ರಿಯೇಟ್ ಆಗಲು ಸಾಧ್ಯವಾಗಿರುವುದು ಸ್ನೇಹಿತ್‌ ಅವರಿಂದ. ಎಲ್ಲರೂ ನನ್ನ ವೆಲ್‌ಕಮ್ ಮಾಡಿದ್ರು. ಆದ್ರೆ ಸ್ನೇಹಿತ್ ನನ್ನನ್ನು ಕರೆದುಕೊಂಡು ಹೋಗಿ ಇಡೀ ಬಿಗ್‌ಬಾಸ್‌ ಮನೆ ತೋರಿಸಿದರು. ಉಳಿದಂತೆ ತುಂಬ ಜನ ಇದ್ದರು. ಆದರೆ ಸ್ನೇಹಿತ್ ಯಾವಾಗಲೂ ನನ್ನ ಸ್ನೇಹಿತರಾಗಿರುತ್ತಾರೆ ಎಂದು ನನಗನಿಸುತ್ತದೆ.

ನಾನು ನ್ಯೂಸ್‌ ಹಿನ್ನೆಲೆಯಿಂದ ಬಂದಿರುವುದು. ನಾನು ಲೆಕ್ಕ ಹಾಕಿ ನೋಡಿದೆ, ಏಳರಿಂದ ಎಂಟು ಜನ ಸೀರಿಯಲ್‌ನವರು. ಅವರೆಲ್ಲ ಬೇರೆ ಬೇರೆ ಚಾನಲ್‌ಗಳಲ್ಲಿ ಸೀರಿಯಲ್ ಮಾಡಿಕೊಂಡು ಬಂದಿರುವುದರಿಂದ, ಅವರ ಮಧ್ಯೆ ಮಾತಾಡೋಕೆ ಸಾಮಾನ್ಯ ಸಂಗತಿಗಳು ತುಂಬ ಇರುತ್ತಿದ್ದವು. ಆಗ ನನಗೆ ‘ಲೇಫ್ಟ್‌ ಔಟ್’ ಅನ್ನೋ ಫೀಲಿಂಗ್ ಬರುತ್ತಿತ್ತು.

ನಂಗೆ ತುಕಾಲಿ ಸಂತೋಷ್ ತುಂಬ ಇಷ್ಟ. ಅವರು ಮಾಡಿದ ಎಲ್ಲ ಪನ್ನಿ ಮೊಮೆಂಟ್‌ಗಳೂ ತುಂಬ ಇಷ್ಟವಾಯ್ತು. ತುಂಬ ಜೆನ್ಯೂನ್ ಅನಿಸಿದ್ದು ವಿನಯ್. ತಪ್ಪಾಗಲಿ, ಸರಿಯಾಗಲಿ ಅವರು ಅದಕ್ಕೆ ನಾನೇ ಕಾರಣ ಎಂದು ರೆಸ್ಪಾನ್ಸಿಬಿಲಿಟಿ ತಗೋತಿದ್ರು. ಹಾಗಾಗಿ ಅವರು ಜೆನ್ಯೂನ್ ಅನಿಸ್ತಿದ್ರು. ಭಾಗ್ಯಶ್ರೀ ಇನೋಸೆಂಟ್ ಅನಿಸಿದ್ರು. ಉಳಿದಂತೆ ಎಲ್ರೂ ಜೆನ್ಯೂನ್‌ ಅನಿಸಿದ್ರು. ಯಾರೂ ಫೇಕ್ ಅಂತ ಇರ್ಲಿಲ್ಲ. ಆದರೆ ನೀತು ಸ್ವಲ್ಪ ಸೂಪರ್‌ಸ್ಪಿಷಿಯಲ್ ಅನಿಸಿದ್ರು. ಟಾಪ್‌ 5ನಲ್ಲಿ ನನ್ನ ಪ್ರಕಾರ, ವಿನಯ್, ಸ್ನೇಹಿತ್, ನಮ್ರತಾ, ಕಾರ್ತಿಕ್ ಮತ್ತು ತನಿಷಾ ಬರಬಹುದು.

ನನ್ನ ಪ್ರಕಾರ, ಸ್ನೇಹಿತ್ ಒಳ್ಳೆಯ ಸ್ಪರ್ಧ, ಅವರೇ ಈ ಸೀಸನ್‌ಲ್ಲಿ ಬಿಗ್‌ಬಾಸ್‌ ವಿನ್ನರ್ ಆಗಬಹುದು ಅನಿಸುತ್ತದೆ. ನೀತು ಸ್ವಲ್ಪ ವೀಕ್ ಸ್ಪರ್ಧಿ. ಅವರು ಹೊರಗಡೆ ಬರಬಹುದು ಅನಿಸುತ್ತದೆ.
ಸ್ಕಿಟ್‌ ಮಾಡಿದ್ದು ಬಿಗ್‌ಬಾಸ್ ಮನೆಯಲ್ಲಿ ನನಗೆ ಬೆಸ್ಟ್ ಮೆಮೊರಿ. ಸಿರಿ ಮತ್ತು ಕಾರ್ತಿಕ್ ಆಕ್ಟ್ ಮಾಡ್ತಿದ್ರು. ಅದನ್ನು ನೋಡಿ ಅವರ ಎದುರು ಕೂತಿದ್ದ ತನಿಷಾ ಅಳೋದಕ್ಕೆ ಶುರುಮಾಡಿಬಿಟ್ಟರು. ಆಗ ನಾನೂ ಎಮೋಷನಲ್ ಆದೆ. ನನಗೆ ಏನೋಪ್ಪಾ ಇಷ್ಟೊಂದು ಇಂಪ್ಯಾಕ್ಟ್ ಇದೆಯಾ ಅನಿಸಿತು.

ನಟನೆಯನ್ನು ಒಂದು ಹಾಬಿಯಾಗಿ ತೆಗೆದುಕೊಂಡಿದ್ದೀನಿ. ಸೀರಿಯಲ್‌ಗಳಲ್ಲಿ ಆಕ್ಟ್ ಮಾಡುವುದರ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ಸಿನಿಮಾಗಳಲ್ಲಿ ನನ್ನ ಸ್ನೇಹಿತರು, ಪರಿಚಿತರುಕರೆದಾಗ ಹೋಗಿ ಅಭಿನಯಿಸಿದ್ದೀನಿ. ಸೀರಿಯಲ್‌ಗಳಲ್ಲಿಯೂ ಒಳ್ಳೆಯ ರೋಲ್ ಸಿಕ್ಕರೆ ನಟಿಸುತ್ತೇನೆ.
ಕುಟುಂಬದವರ ಬಗ್ಗೆ ಅಭಿಪ್ರಾಯ ಹೇಳಿ ಅಂದಾಗ ನಾನು ಎಮೋಷನಲ್ ಆಗಿಬಿಟ್ಟೆ. ಯಾಕೆಂದರೆ ನಾನುನನ್ನ ಫ್ಯಾಮಿಲಿಯನ್ನು ಮಿಸ್ ಮಾಡ್ಕೋತಿನಿ ಅಂತ ಗೊತ್ತಾಗಿದ್ದು ಈಗಲೇ. ಬಿಗ್‌ಬಾಸ್ ಮನೆಯೊಳಗೆ ಬಂದಾಗಲೇ!

‘ಸ್ವಾತಂತ್ರ್ಯಕ್ಕಿಂತ ದೊಡ್ಡ, ಮಹತ್ವದ, ಮೌಲ್ಯಯುತವಾದ ಸಂಗತಿ ಬೇರೆ ಯಾವುದೂ ಇಲ್ಲ’ -ಇದು ನಾನು ಬಿಗ್‌ಬಾಸ್‌ನಿಂದ ಕಲಿತ ಪಾಠ. ಯಾಕೆಂದರೆ ನಾನು ಬಿಗ್‌ಬಾಸ್‌ನಲ್ಲಿ ಕಳೆದುಕೊಂಡಿದ್ದು ಅದನ್ನೇ.

ಹೀಗೆ ಇನ್ನೂ ಹಲವು ಸಂಗತಿಗಳನ್ನು ಗೌರೀಶ ಅಕ್ಕಿ ಈ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಅದನ್ನು JioCinemaದಲ್ಲಿ ಈ ಕೊಂಡಿಯ ಮೂಲಕ ವೀಕ್ಷಿಸಬಹುದು:

https://jiocinema.onelink.me/fRhd/512tjg18
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ದೈನಂದಿನ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಕ್ಕೆ ವೀಕ್ಷಿಸಿ.

#BiggBossKannada #BBK10 #KichchaSudeep #BBK10onJioCinema #BBKOnJioCinema #ColorsKannada

Tags: bbk 10bbk 10 contestantsbbk 10 kannadabbk 10 kannada contestantsbbk 10 kannada updatebbk 10 trollbbk season 10big boss kannada season 10bigg boss 10 contestantsbigg boss 10 kannadabigg boss 10 varthur santhoshbigg boss kannada 10bigg boss kannada season 10bigg boss kannada season 10 contestantsbigg boss kannada season 10 updatebigg boss season 10biggboss kannada season 10colors kannada bigg boss 10colors kannada bigg boss season 10
ShareTweetSendShare
Join us on:

Related Posts

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್

by Shwetha
February 3, 2026
0

ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

ಶಾಸಕರಿಗೆ ಲ್ಯಾಪ್‌ಟಾಪ್ / ಐಫೋನ್ ಆಫರ್: ಗ್ಯಾಜೆಟ್ ಬೇಕಂದ್ರೆ ಈ ಷರತ್ತು ಪಾಲಿಸಲೇಬೇಕು ಎಂದ ಸ್ಪೀಕರ್ ಯು.ಟಿ.ಖಾದರ್

by Shwetha
February 3, 2026
0

ಬೆಂಗಳೂರು: ವಿಧಾನಸಭೆಯ ಸದಸ್ಯರಿಗೆ ಹೈಟೆಕ್ ಸ್ಪರ್ಶ ನೀಡಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ. ಶಾಸಕರಿಗೆ ಲ್ಯಾಪ್‌ಟಾಪ್ ಅಥವಾ ದುಬಾರಿ ಐಫೋನ್ ನೀಡುವ ಆಲೋಚನೆ ಇದೆ ಎಂದು ಸ್ವತಃ ಸ್ಪೀಕರ್...

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram