ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಪ್ರಚಾರ ಕಾರ್ಯ ಆರಂಭಿಸಿರುವ ಅವರು, ನನಗೆ ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ. ಹೀಗಾಗಿ ನನ್ನ ಗೆಲುವು ನಿಶ್ಚಿತ. ನಾನು ಕಳೆದ 9 ವರ್ಷಗಳ ಹಿಂದೆ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ವೇಳೆ ಕೇವಲ 17 ದಿನ ಕೆಲಸ ಮಾಡಿದ್ದೆ. ಈ ಬಾರಿ ಹೆಚ್ಚಿನ ಸಮಯ ಶಿವಮೊಗ್ಗದಲ್ಲಿ ಇರುತ್ತೇನೆ. ನನ್ನ ಸಹೋದರ ಸಹ ಬೆಂಬಲವಾಗಿ ಇದ್ದಾನೆ. ಈಗಾಗಲೇ ಜಿಲ್ಲೆಯಲ್ಲಿ ಮನೆ ಮಾಡಿದ್ದೇನೆ. ಶಿವಣ್ಣ ಬಂದೇ ಬರುತ್ತಾರೆ ಬರುತ್ತಾರೆ ಎಂದು ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಶಿವರಾಜ್ ಕುಮಾರ್, ನನಗೆ ಸಿನಿಮಾ ಮುಖ್ಯ ಇದ್ದಂತೆ. ಗೀತಾಗೆ ರಾಜಕೀಯ. ಇದು ಚುನಾವಣೆ. ಹೀಗಾಗಿ ಗೆಲ್ಲುತ್ತೇವೆ ಎಂಬ ಭರವಸೆ ಇದೆ. ನನ್ನ ಒತ್ತಾಯಕ್ಕೆ ಯಾರೂ ಪ್ರಚಾರ ಮಾಡುವುದು ಬೇಡ ಎಂದು ಹೇಳಿದ್ದಾರೆ.